- Advertisement -
- Advertisement -
ಪುತ್ತೂರು: ರಾಜ್ಯದ ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ ನಾರಾಯಣ್ ಅವರಿಗೆ ಭಜರಂಗದಳ ದಕ್ಷಿಣ ಪ್ರಾಂತದ ವತಿಯಿಂದ ಮನವಿ ಸಲ್ಲಿಸಲಾಯಿತು.
ಲವ್ ಜಿಹಾದ್ ,ಗೋ ಹತ್ಯೆ ನಿಷೇಧ ಕುರಿತಂತೆ ಕಠಿಣ ಕಾನೂನು ಕ್ರಮ ತರುವಂತೆ ಹಾಗು ಚಿಕ್ಕಮಗಳೂರಿನ ದತ್ತಪೀಠದಲ್ಲಿ ಖಾಯಂ ಅರ್ಚಕರನ್ನು ನೇಮಿಸುವಂತೆ ಆಗ್ರಹಿಸಿ ರಾಜ್ಯದ ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ ನಾರಾಯಣ್ ಅವರಿಗೆ ಬಜರಂಗದಳ ದಕ್ಷಿಣ ಪ್ರಾಂತದ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಭಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳೀಕೃಷ್ಣ ಹಸಂತ್ತಡ್ಕ, ಪುತ್ತೂರು ಜಿಲ್ಲಾ ಸಂಯೋಜಕ ಶ್ರೀಧರ ತೆಂಕಿಲ, ಪುತ್ತೂರು ಪ್ರಖಂಡ ಸಹ ಸಂಯೋಜಕ ಜಯಂತ ಕುಂಜೂರುಪಂಜ, ವಿಶ್ವ ಹಿಂದು ಪರಿಷದ್ ಪುತ್ತೂರು ಪ್ರಖಂಡ ಸಹ ಕಾರ್ಯದರ್ಶಿ ವಿಶಾಖ್ ಸಸಿಹಿತ್ಲು ಉಪಸ್ಥಿತರಿದ್ದರು.
- Advertisement -