Sunday, May 5, 2024
spot_imgspot_img
spot_imgspot_img

ಅರ್ಜುನ ಪ್ರಶಸ್ತಿ ವಿಜೇತ, ಹಿರಿಯ ಪೊಲೀಸ್ ಅಧಿಕಾರಿಯ ಶವ ಕಾಲುವೆಯಲ್ಲಿ ಪತ್ತೆ

- Advertisement -G L Acharya panikkar
- Advertisement -

ಅರ್ಜುನ ಪ್ರಶಸ್ತಿ ಪುರಸ್ಕೃತ, ಪಂಜಾಬ್ ಉಪ ಪೊಲೀಸ್ ವರಿಷ್ಠಾಧಿಕಾರಿ ದಲ್ಬೀರ್ ಸಿಂಗ್ ಡಿಯೋಲ್ ಅವರ ಶವ ಕಾಲುವೆಯಲ್ಲಿ ಪತ್ತೆಯಾಗಿರುವ ಘಟನೆ ಪಂಜಾಬ್‌ನ ಜಲಂಧರ್‌ನಲ್ಲಿ ನಡೆದಿದೆ.

ಭಾನುವಾರ ರಾತ್ರಿ ಹೊಸ ವರ್ಷಾಚರಣೆಗೆಂದು ತೆರಳಿದ್ದ ದಲ್ಬೀರ್ ಸಿಂಗ್ ಡಿಯೋಲ್ ಮನೆಗೆ ಹಿಂತಿರುಗದ ಹಿನ್ನೆಲೆಯಲ್ಲಿ ಕುಟುಂಬದವರು ನಾಪತ್ತೆ ದೂರು ದಾಖಲಿಸಿದ್ದು, ಇಂದು ಬೆಳಿಗ್ಗೆ ಜಲಂಧರ್ ಪಟ್ಟಣದ ಹೊರವಲಯದಲ್ಲಿರುವ ಬಸ್ತಿ ಬಾವಾ ಖೇಲ್‌ನ ಕಾಲುವೆಯ ಬಳಿ ಶವ ಪತ್ತೆಯಾಗಿದೆ.

ಸ್ನೇಹಿತರ ಜೊತೆ ಹೊಸ ವರ್ಷಾಚರಣೆಗೆಂದು ತೆರಳಿದ್ದ ಡಿಎಸ್‌ಪಿ ಮನೆಗೆ ವಾಪಸ್ಸಾಗಲಿಲ್ಲ ಎಂದು ಡಿಎಸ್‌ಪಿ ಕುಟುಂಬದವರು ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಹುಡುಕಾಟ ಆರಂಭಿಸಿದ್ದು, ಇಂದು ಕಾಲುವೆಯಲ್ಲಿ ಶವ ಪತ್ತೆಯಾಗಿದ್ದು, ದೇಹದ ಭಾಗದಲ್ಲಿ ಗಾಯದ ಗುರುತುಗಳು ಪತ್ತೆಯಾಗಿದೆ.

- Advertisement -

Related news

error: Content is protected !!