- Advertisement -
- Advertisement -

- https://youtu.be/BI2cq3fWNic



ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಹಿಳೆಗೆ ಜಾತಿ ನಿಂದನೆಯ ಚ್ಯುತಿ ಬರುವಂತೆ ಸಂದೇಶ ರವಾನಿಸಿದ ಆಪಾದಿತನನ್ನು ಮಂಗಳೂರು ನಗರ ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.ಅ.18ರಂದು ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ146/2025, ಕಲಂ 79, 190 2.2.2., 66(2), 67 ಐಟಿ ಕಾಯ್ದೆ ಹಾಗೂ 3(1)(w)(i)(ii) ಎಸ್.ಸಿ/ಎಸ್.ಟಿ.ಕಾಯ್ದೆಯಡಿ ಪ್ರಕರಣ ದಾಖಲಿಸಲಾಯಿತು.
ಪ್ರಕರಣದಲ್ಲಿ ಕಾರ್ಕಳ ನಿಟ್ಟೆ ಗ್ರಾಮದ ಅಭಿಷೇಕ್ ಆಚಾರ್ಯ ಎಂಬಾತನು ದೂರುದಾರರನ್ನು ಬೆದರಿಸಿ ಅವರ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಲ್ಲದೆ, ಆತ ಆತ್ಮಹತ್ಯೆ ಮಾಡಲು ಮುನ್ನ ನೇಣು ಹಾಕಿರುವ ಫೋಟೋಗಳನ್ನು ದೂರುದಾರರಿಗೆ ಕಳುಹಿಸಿದ್ದ. ಬಳಿಕ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
- Advertisement -








