- Advertisement -
- Advertisement -
ಪುತ್ತೂರು: ಪುತ್ತೂರು: ಬಿಜೆಪಿ ಕಾರ್ಯಕರ್ತನ ಮನೆಗೆ ಕಾಂಗ್ರೆಸ್ ಕಾರ್ಯಕತರು ನುಗ್ಗಿ ದಾಂಧಲೆ ನಡೆಸಿ ಜೀವಬೆದರಿಕೆಯೊಡ್ಡಿದ ಘಟನೆ ಪುತ್ತೂರು, ಚಿಕ್ಕ ಮುಡ್ನೂರು ಗ್ರಾಮದ ತಾರಿಗುಡ್ಡೆ ಎಂಬಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 8 ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕಡಬ ತಾಲೂಕಿನ ಪಾತಾಜೆ ನಿವಾಸಿ ರೌಡಿಶೀಟರ್ ಪ್ರಜ್ವಲ್ ರೈ(34), ವಿಟ್ಲ ಕಂಬಳಬೆಟ್ಟು ನಿವಾಸಿ ಸುಶಾಂತ್ ಶೆಟ್ಟಿ (31), ಪುತ್ತೂರಿನ ಆರ್ಯಾಪು ನಿವಾಸಿ ಸನತ್ ರೈ(31), ಬಲ್ನಾಡು ನಿವಾಸಿ ರೋಹಿತ್ ನಾಯ್ಕ (26), ಸಾಮೆತಡ್ಕ ನಿವಾಸಿ ಅಖಿಲ್(28), ಆರ್ಯಾಪು ನಿವಾಸಿ ಕೀರ್ತನ್ ರೈ(26), ಬನ್ನೂರು ನಿವಾಸಿ ಸರ್ವೇಶ್ ರಾಜ್ ಅರಸ್(24), ವಿಟ್ಲ ಕಂಬಳಬೆಟ್ಟು ನಿವಾಸಿ ಸುಮಿತ್ ಶೆಟ್ಟಿ (29) ಎಂದು ಗುರುತಿಸಲಾಗಿದೆ.
ಪುತ್ತೂರು ನಗರ ಠಾಣಾ ಇನ್ಸ್ ಪೆಕ್ಟರ್ ಸತೀಶ್ ಜಿ.ಜೆ. ಹಾಗೂ ಎಸ್ಟ್ ನಂದಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
- Advertisement -