ಕಾರಿನಲ್ಲಿ ನಕಲಿ ನೋಟುಗಳನ್ನು ಸಾಗಾಟ ಮಾಡುತ್ತಿದ್ದ ಐವರನ್ನು ಪೊಲೀಸರು ಬಂಧಿಸಿದ ಘಟನೆ ಗೋಕಾಕ ಬೆಳಗಾವಿ ರಸ್ತೆಯ ಕಡಬಗಟ್ಟಿ ಗ್ರಾಮದ ಬಳಿ ನಡೆದಿದೆ.
ಬಂಧಿತರು ಮೂಡಲಗಿ ತಾಲೂಕಿನ ಅರಭಾವಿ ಅನ್ವರ ಮೊಮ್ಮದಸಲಿಂ ಯಾದವಾಡ, ಮಹಾಲಿಂಗಪುರದ ಸದ್ದಾಂ ಮುಸಾ ಯಡಹಳ್ಳಿ, ರವಿ ಚನ್ನಪ್ಪ ಹ್ಯಾಗಡಿ, ದುಂಡಪ್ಪ ಮಹಾದೇವ ವನಶನವಿ ಹಾಗೂ ವಿಠಲ ಹನುಮಂತ ಹೊಸಕೋಟೆ ಎಂದು ತಿಳಿದು ಬಂದಿದೆ.
ಗೋಕಾಕಿನ ಬೆಳಗಾವಿ ರಸ್ತೆಯ ಕಡಬಗಟ್ಟಿ ಗ್ರಾಮದ ಮೂಲಕ ಸಾಗುವ ರಸ್ತೆಯಲ್ಲಿ ಕಾರೊಂದನ್ನು ಪೊಲೀಸರು ಪರಿಶೀಲಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.
100 ಹಾಗೂ 500 ರೂ. ಮುಖಬೆಲೆಯ ನಕಲಿ ನೋಟುಗಳನ್ನು ಸಾಗಾಟ ಮಾಡುವ ವೇಳೆ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.
ಬಂಧಿತರನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ, ಅವರು ಗೋಕಾಕ, ಮಹಾಲಿಂಗಪೂರ, ಮುಧೋಳ, ಯರಗಟ್ಟಿ, ಹಿಡಕಲ್ ಡ್ಯಾಂ, ಬೆಳಗಾವಿ, ಧಾರವಾಡ ಮುಂತಾದ ಸ್ಥಳಗಳಲ್ಲಿ 1 ಲಕ್ಷ ಅಸಲು ನೋಟುಗಳಿಗೆ 4 ಲಕ್ಷ ಖೋಟಾ ನೋಟುಗಳನ್ನು ಚಲಾವಣೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಬಗ್ಗೆ ಗೋಕಾಕ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.