Tuesday, May 7, 2024
spot_imgspot_img
spot_imgspot_img

ಮಂಗಳೂರು: ಮಹಿಳೆ ಕತ್ತಿನಲ್ಲಿದ್ದ ಚಿನ್ನದ ಸರ ಎಗರಿಸಿದ್ದ ಅಂತರ್ ರಾಜ್ಯ ಸುಲಿಗೆಕೋರರ ಬಂಧನ

- Advertisement -G L Acharya panikkar
- Advertisement -

ಮಂಗಳೂರು: ನಗರದ ಬಜಾಲ್ ಜೆ.ಎಂ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಕತ್ತಿನಲ್ಲಿ 16 ಗ್ರಾಂ ತೂಕದ ಚಿನ್ನದ ಸರವನ್ನು ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಚೆರ್ಕಳ ಮೂಲದ ಪ್ರಸಕ್ತ ಬಂಟ್ವಾಳ ತಾಲೂಕಿನ ಬಿ. ಮೂಡ ಗ್ರಾಮದ ಅಲಿ ಯಾನೆ ಅಶ್ರು (32) ಮತ್ತು ಬಿ ಮೂಡ ಗ್ರಾಮದ ಶಾಂತಿ ಅಂಗಡಿಯ ಜುಬೇರ್ (32) ಎಂದು ಗುರುತಿಸಲಾಗಿದೆ. ಮೊಹಮ್ಮದ್ ಅಲಿ ಯಾನೆ ಅಶ್ರು ವಿರುದ್ದ ಕೇರಳ ರಾಜ್ಯದ ಬದಿಯಡ್ಕ, ಮಂಜೇಶ್ವರ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಠಾಣೆ, ವಿಟ್ಳ ಪೊಲೀಸ್ ಠಾಣೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ, ಬರ್ಕೆ ಪೊಲೀಸ್ ಠಾಣೆ ಗಳಲ್ಲಿ ಮನೆ ಕನ್ನ ಕಳವು, ಸುಲಿಗೆ ಪ್ರಕರಣ, ಜೈಲಿನಲ್ಲಿ ಹೊಡೆದಾಟ ಸೇರಿ 15 ಪ್ರಕರಣಗಳು ದಾಖಲಾಗಿದೆ.

ಆರೋಪಿಗಳಿಂದ 90,000 ರೂ. ಬೆಲೆಯ ಚಿನ್ನದ ಸರವನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಕಾರ್ಯಾಚರಣೆಯಲ್ಲಿ ಕಂಕನಾಡಿ ನಗರ ಠಾಣೆಯ ನಿರೀಕ್ಷಕ ಟಿ.ಡಿ. ನಾಗರಾಜ್ ನೇತೃತ್ವದ ಎಸ್ಸೈಗಳಾದ ಶಿವಕುಮಾರ್, ಅನಿತಾ ನಿಕ್ಕಂ, ಎಸ್ಸೈ ವೆಂಕಟೇಶ್, ಚಂದ್ರಶೇಖರ ಮತ್ತು ಸಿಬ್ಬಂದಿಗಳಾದ ಜಯಾನಂದ, ಕುಶಾಲ್ ಹೆಗ್ಡೆ, ದೀಪಕ್ ಕೋಟ್ಯಾನ್, ರಾಜೇಶ್ ಕೆ.ಎನ್, ರಾಘವೇಂದ್ರ, ಸಂತೋಷ್ ಮಾದರ್, ಪ್ರವೀಣ್ ಪಾಲ್ಗೊಂಡಿದ್ದರು.

- Advertisement -

Related news

error: Content is protected !!