Sunday, May 5, 2024
spot_imgspot_img
spot_imgspot_img

ಕಲ್ಯಾಣ ಮಂಟಪಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ‌ ಮಾಡುತ್ತಿದ್ದ ಆರೋಪಿ ಬಂಧನ;

- Advertisement -G L Acharya panikkar
- Advertisement -

ಕಲ್ಯಾಣ ಮಂಟಪಗಳನ್ನೇ ಟಾರ್ಗೆಟ್​ ಮಾಡಿ ಕಳ್ಳತನ‌ ಮಾಡುತ್ತಿದ್ದ ಆರೋಪಿಯನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆ ನಗರದ ಶಾಂತಿ ನಗರದ ನಿವಾಸಿ ಕಿರಣ್ (26) ಬಂಧಿತ ಆರೋಪಿ. ಈತನಿಂದ 74 ಸಾವಿರ ರೂಪಾಯಿ ಮೌಲ್ಯದ 13.25 ಗ್ರಾಂ ತೂಕದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ದಾವಣಗೆರೆ ನಗರದ ಸರಸ್ವತಿ ಬಡಾವಣೆಯ ಚಿದಾನಂದಗೌಡ ಎಂಬುವರ ಪತ್ನಿಗೆ ಸೇರಿದ ಚಿನ್ನ ಇದಾಗಿತ್ತು.

ನಕಲಿ ಕೀ ಬಳಸಿ ಕಲ್ಯಾಣ ಮಂಟಪದ ರೂಮ್ ಪ್ರವೇಶ ಮಾಡಿದ್ದು ಸಿಸಿ ಕ್ಯಾಮರಾದಲ್ಲಿ ದಾಖಲಾಗಿತ್ತು. ಇದೇ ರೀತಿ ಕಳೆದ ಎರಡು ಎರಡು ವರ್ಷಗಳಲ್ಲಿ ಮೂರು ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಯಾಣ ಮಂಟಪದಲ್ಲಿ ಕಳ್ಳತನ ಮಾಡಿದ್ದ. ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ‌ಪ್ರಕರಣ ದಾಖಲಾಗಿದ್ದು, ಆರೋಪಿಯನ್ನ ಬಂಧಿಸಿದ ಪೊಲೀಸರು, ಚಿನ್ನದ ಆಭರಣವನ್ನು ವಾರಸುದಾರರಿಗೆ ‌ನೀಡಿದ್ದಾರೆ.

- Advertisement -

Related news

error: Content is protected !!