Tuesday, May 7, 2024
spot_imgspot_img
spot_imgspot_img

‘ಗ್ಯಾರೆಂಟಿ ಯೋಜನೆ’ಗೆ ಆಶಾ ಕಾರ್ಯಕರ್ತೆಯರು ಪಟ್ಟು : ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

- Advertisement -G L Acharya panikkar
- Advertisement -
vtv vitla

ಬೆಂಗಳೂರು : ಗ್ಯಾರೆಂಟಿ ಯೋಜನೆ ಈಡೇರಿಸುವಂತೆ ವಿಪಕ್ಷಗಳು, ಜನರು ಕಾಂಗ್ರೆಸ್ ಸರ್ಕಾರವನ್ನು ಪಟ್ಟು ಹಿಡಿದಿದ್ದಾರೆ. ಉಚಿತ ಬಸ್ ಪಾಸ್, 200 ಯೂನಿಟ್ ಉಚಿತ ವಿದ್ಯುತ್ ನೀಡುವಂತೆ ಜನರು ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ.

ಇದೆಲ್ಲದರ ನಡುವೆ ಇದೀಗ ಆಶಾ ಕಾರ್ಯಕರ್ತೆಯರು ಕೂಡ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕಳೆದ ಮೂರು ನಾಲ್ಕು ತಿಂಗಳಿಂದ ಸಂಬಳ ನೀಡದಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಿಯಾಗಿ ವೇತನ ನೀಡುವಂತೆ ರಾಜ್ಯ ಸರ್ಕಾರದ ಮುಂದೆ ಆಶಾ ಕಾರ್ಯಕರ್ತೆಯರು ಅಹವಾಲು ನೀಡಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಮನವಿ ಮಾಡಿದ್ದಾರೆ.

ಕಾಂಗ್ರೆಸ್ 6ನೇ ಗ್ಯಾರಂಟಿಯಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ 8 ಸಾವಿರ ರೂಪಾಯಿ ಮತ್ತು ಬಿಸಿಯೂಟ ನೌಕರರಿಗೆ ಐದು ಸಾವಿರ ರೂಪಾಯಿ ವೇತನ ನೀಡುವುದಾಗಿ ಬೆಳಗಾವಿಯಲ್ಲಿ ಇತ್ತೀಚೆಗೆ ಕ್ರಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಘೋಷಿಸಿದ್ದರು.

- Advertisement -

Related news

error: Content is protected !!