- Advertisement -
- Advertisement -


ಸುಳ್ಯ: ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ಸಾಹಿತ್ಯ ಸಮಾರಂಭದಲ್ಲಿ ಬಹುಮುಖ ಪ್ರತಿಭೆಯಾದ ಅಶ್ಮಿತ್ ಎ.ಜೆ. ಇವರಿಗೆ ಕನ್ನಡ ಸಾಂಸ್ಕೃತಿಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಇವರು ತಮ್ಮ ಬಾಲ್ಯಾವಸ್ಥೆಯಲ್ಲಿಯೇ ಸಾಂಸ್ಕೃತಿಕ ಕ್ಷೇತ್ರದಲ್ಲಿ ಹಲವಾರು ಕಲಾ ಕ್ಷೇತ್ರಗಳಲ್ಲಿ ತೊಡಗಿಕೊಂಡು ಹಲವಾರು ಬಹುಮಾನ, ಸನ್ಮಾನ ಪ್ರಶಸ್ತಿಗಳ ಗೌರವಕ್ಕೆ ಪಾತ್ರರಾಗಿದ್ದಾರೆ.

ಅಶ್ಮಿತ್ ಎ.ಜೆ. ಅವರು ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಎಮ್ಮೆತೊಟ್ಟಿ ನಿವಾಸಿ, ಪ್ರಸ್ತುತ ಮಂಗಳೂರಿನಲ್ಲಿ ನ್ಯಾಯವಾದಿಯಾಗಿರುವ ಜಯರಾಮ ಎ. ಮತ್ತು ಆಶಾ ದಂಪತಿಗಳ ಪುತ್ರರಾಗಿದ್ದು, ಮಂಗಳೂರಿನ ಸಂತ ಆಲೋಶಿಯಸ್ ಗೋನ್ಝಾಗ ಶಾಲೆಯ 3ನೇ ತರಗತಿ ವಿದ್ಯಾರ್ಥಿಯಾಗಿದ್ದಾರೆ.


- Advertisement -