ವಿಟ್ಲ: ಎಲ್ಲೆಡೆಯೂ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು ಸರಕಾರ ಲಾಕ್ಡೌನ್ ಘೋಷಿಸಿದ್ದು ಕೆಲಸ ಕಾರ್ಯವಿಲ್ಲದೆ ಜನಜೀವನ ಕಷ್ಟಕರವಾಗಿದೆ. ಈ ಸಂದರ್ಭದಲ್ಲಿ ಬಡವರು ಹೊತ್ತಿನ ಊಟಕ್ಕೂ ಪರದಾಡಬೇಕಾಗಿದೆ. ಇಂತಹ ಪರಿಸ್ಧಿತಿಯಲ್ಲಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಇವರು ಬಡವರ ಕಷ್ಟಗಳನ್ನ ತಿಳಿದು ಅವರಿಗೆ ಸ್ಪಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಕಳೆದ ಲಾಕ್ ಡೌನ್ ಸಂದರ್ಭದಲ್ಲಿ ಬಡವರ ಕಷ್ಟಗಳಿಗೆ ಸ್ಪಂದಿಸಿ ಪುತ್ತೂರು, ಕಬಕ, ಉಪ್ಪಿನಂಗಡಿ ಹೀಗೆ ಹಲವು ಕಡೆಗಳಲ್ಲಿ ಬಡವರಿಗೆ ಕಿಟ್ ಹಾಗೂ ಅವರ ಕಷ್ಟಗಳಿಗೆ ಪರಿಹಾರ ನೀಡಿದ್ದಾರೆ. ಅದೇ ರೀತಿಯಲ್ಲಿ ಈ ಲಾಕ್ ಡೌನ್ ಸಂದರ್ಭದಲ್ಲಿ ಬಡವರ ಕಷ್ಟಗಳಿಗೆ ಸ್ಪಂದಿಸುವ ಸಮಾಜಮುಖಿ ಕಾರ್ಯದಲ್ಲಿ ತೊಡಗಿದ್ದಾರೆ.
ಕೋವಿಡ್19 ತೀವ್ರತೆಯ ಹಿನ್ನೆಲೆಯಲ್ಲಿ ಆಟೋರಿಕ್ಷಾ ಚಾಲಕರು ತಮ್ಮ ಕಷ್ಟಗಳನ್ನ ಹೇಳಿಕೊಂಡಿದ್ದು, ಇದನ್ನು ತಿಳಿದ ಅಶೋಕ್ ಕುಮಾರ್ ರೈ ಅವರ ರೈ ಎಸ್ಟೇಟ್ ಆ್ಯಂಡ್ ಎಜ್ಯುಕೇಶನ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಹಲವು ಕಡೆಗಳಲ್ಲಿ ರಿಕ್ಷಾ ಚಾಲಕರಿಗೆ ಕಿಟ್ ವಿತರಣೆ ಮಾಡಿದ್ದಾರೆ. ಅದೇ ರೀತಿಯಲ್ಲಿ ಇಂದು ವಿಟ್ಲ ಆಟೋರಿಕ್ಷಾ ಚಾಲಕರಿಗೆ ಕುದ್ದಾಗಿ ತಾನೆ ಬಂದು ಕಿಟ್ ವಿತರಣೆ ಮಾಡಿದ್ದಾರೆ.