- Advertisement -
- Advertisement -
ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ರವಿ ರೋಡ್ರಿಗಸ್ ರವರ ಮನೆ ಮೇಲೆ ನಿನ್ನೆ ರಾತ್ರಿ ಗಾಳಿ ಮಳೆಗೆ ತೆಂಗಿನ ಮರ ಬಿದ್ದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭೇಟಿ ನೀಡಿದರು.
ಈ ವೇಳೆ ಮಾತನಾಡಿದ ಅಶೋಕ್ ಕುಮಾರ್ ರೈ ಮಳೆಯಿಂದ ಆದ ಹಾನಿ ಬಗ್ಗೆ ವಿಟ್ಲದ ಕಾಂಗ್ರೆಸ್ ಕಾರ್ಯಕರ್ತರು ತಿಳಿಸಿದರು. ಮನೆಗೆ ತುಂಬಾ ಹಾನಿಯಾಗಿದೆ. ಈಗ ಸರ್ಕಾರ ಅಧಿಕಾರಕ್ಕೆ ಬರದ ಕಾರಣ ನನ್ನ ವೈಯಕ್ತಿಕ ನೆಲೆಯಲ್ಲಿ ಶೀಟ್ ಒದಗಿಸುವ ಮೂಲಕ ಸಹಾಯ ಮಾಡುತ್ತೇವೆ ಎಂದು ಭರವಸೆ ನೀಡಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಸ್ಥಳೀಯರು ಜೊತೆಗಿದ್ದರು.
- Advertisement -