



ಪುತ್ತೂರು: ದೀಪಾವಳಿ ಪ್ರಯುಕ್ತ ನ. 2 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ನಡೆಯಲಿರುವ ಅಶೋಕ ಜನ-ಮನ ಕಾರ್ಯಕ್ರಮಕ್ಕೆ ತಾಲೂಕಿನ ಪ್ರತೀ ಮನೆಗೂ ಆಹ್ವಾನವನ್ನು ನೀಡಲಾಗುವುದು ಎಂದು ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಹೇಳಿದರು.
ಅವರು ತಿಂಗಳಾಡಿ ಗ್ರಾಪಂ ಸಭಾಂಗಣದಲ್ಲಿ ನಡೆದ ಅಶೋಕ ಜನಮನದ ಕರಪತ್ರವನ್ನು ಬಿಡುಗಡೆ ಮಾಡುವ ಮೂಲಕ ಗ್ರಾಮ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು.
ದೀಪಾವಳಿಗೆ ಪ್ರತೀ ವರ್ಷ ಶಾಸಕರಾದ ಅಶೋಕ್ ರೈ ಅವರ ನೇತೃತ್ವದಲ್ಲಿ ವಸ್ತ್ರ ವಿತರಣೆ ಕಾರ್ಯಕ್ರಮ ನಡೆಸುವ ಮೂಲಕ ಬಡವರ ಜೊತೆ ಸಹಭೋಜನವನ್ನು ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಮಹಿಳೆಯರು, ಪುರುಷರು ಹಾಗೂ ಮಕ್ಕಳು ಭಾಗವಹಿಸಿ ಕಾರ್ಯಕ್ರಮವನ್ನು ಯಸಶ್ವಿಗೊಳಿಸಬೇಕು ಎಂದು ವಿನಂತಿಸಿದರು.
ವೇದಿಕೆಯಲ್ಲಿ ಪ್ರಮುಖರಾದ ಶಿವನಾಥ ರೈ ಮೇಗಿನಗುತ್ತು, ಎ ಕೆ ಜಯರಾಮ ರೈ, ಕಮಲೇಶ್ ಸರ್ವೆದೊಳಗುತ್ತುಸಂತೋಷ್ ನೆಹರೂನಗರ, ಶಶಿ ಕೃಷ್ಣನಗರ,ಸುಚರಿತ್ ಜೈನ್ ಬೊಳುವಾರು ಸೇರಿದಂತೆ ಕೆದಂಬಡಿ ಗ್ರಾಮಸ್ಥರು ಉಸ್ಥಿತರಿದ್ದರು.
ಟ್ರಸ್ಟ್ ಸದಸ್ಯೆ ಪದ್ಮಾವತಿ ಸ್ವಾಗತಿ, ಅರುಣಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.