Friday, May 3, 2024
spot_imgspot_img
spot_imgspot_img

ವಿಷ ಸೇವಿಸಿ ಎಎಸ್‌ಐ ಆತ್ಮಹತ್ಯೆ..!

- Advertisement -G L Acharya panikkar
- Advertisement -

ವಿಷ ಸೇವಿಸಿ ಎಎಸ್‌ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಗುಡಿಗೇರಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮೂಲತಃ ಗದಗ ಜಿಲ್ಲೆಯ ಗಜೇಂದ್ರಗಢ ಸಮೀಪದ ಶಾಂತಗಿರಿ ಗ್ರಾಮದವರಾಗಿದ್ದು , ಗುಡಿಗೇರಿ ಪೊಲೀಸ್ ಠಾಣೆಯ ಎಎಸ್‌ಐ ಬಸವರಾಜ ಶಾಂತವೀರಪ್ಪ ಪಾಯಣ್ಣವರ (54) ಎಂದು ಗುರುತಿಸಲಾಗಿದೆ.

ರಾತ್ರಿ ಪಾಳಿ ಕೆಲಸ ಮುಗಿಸಿ ವಸತಿ ಗೃಹಕ್ಕೆ ಹೋಗಿದ್ದರು. ವಸತಿ ಗೃಹದ ಆವರಣದಲ್ಲಿ ದೇಗುಲದ ಬಳಿ ಮಲಗಿದ್ದ ಇವರನ್ನು
ಕುಟುಂಬಸ್ಥರು ಊಟಕ್ಕೆ ಎಬ್ಬಿಸಲು ಹೋದಾಗ ಎದ್ದೇಳಲಿಲ್ಲ. ಆಗ ಆತ್ಮಹತ್ಯೆ ವಿಷಯ ಬೆಳಕಿಗೆ ಬಂದಿದೆ. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಬಹಿರಂಗವಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮೃತ ಎಎಸ್‌ಐ ಕೆಲವು ದಿನಗಳಿಂದ ಕಾಲುನೋವಿನಿಂದ ಬಳಲುತ್ತಿದ್ದರು. ಅದೇ ಆತ್ಮಹತ್ಯೆಗೆ ಕಾರಣವಿರಬಹುದೆಂದು ಶಂಕಿಸಲಾಗಿದೆ. ಈ ಘಟನೆಯ ಬಗ್ಗೆ ಗುಡುಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!