Saturday, June 28, 2025
spot_imgspot_img
spot_imgspot_img

ಫ್ಲೈಓವರ್ ಕಾಮಗಾರಿ ರಾಡ್​ ಬಿದ್ದು ಗಾಯಗೊಂಡಿದ್ದ ಎಎಸ್​ಐ ಸಾವು..!

- Advertisement -
- Advertisement -

ಹುಬ್ಬಳ್ಳಿ: ಫ್ಲೈಓವರ್ ಕಾಮಗಾರಿಯ ರಾಡ್​ ಬಿದ್ದು ಗಾಯಗೊಂಡಿದ್ದ ಹುಬ್ಬಳ್ಳಿ ಉಪನಗರ ಠಾಣೆಯ ಎಎಸ್​ಐ ನಾಭಿರಾಜ್ ದಯಣ್ಣವರ (59)ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸೆಪ್ಟೆಂಬರ್​ 10ರಂದು ಕೋರ್ಟ್ ವೃತ್ತದ ಬಳಿ ಕರ್ತವ್ಯದ ವೇಳೆ ಫ್ಲೈಓವರ್ ಕಾಮಗಾರಿಯ ರಾಡ್​ ಬಿದ್ದು ಎಎಸ್​ಐ ನಾಭಿರಾಜ್ ದಯಣ್ಣವರ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೆ ಅವರನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಇಂದು (ಸೆ.15) ಚಿಕಿತ್ಸೆ ಫಲಿಸದೆ ಎಎಸ್​ಐ ನಾಭಿರಾಜ್ ದಯಣ್ಣವರ ಕೊನೆಯುಸಿರೆಳೆದಿದ್ದಾರೆ.

ಗುತ್ತಿಗೆದಾರರ ನಿರ್ಲಕ್ಷ್ಯ ಹಿನ್ನೆಲೆ ಅವಘಡ ಸಂಭವಿಸಿದೆ ಎಂದು ಝಂಡು ಕನ್​ಸ್ಟ್ರಕ್ಷನ್ ನಿರ್ದೇಶಕರಾದ ರಾಮ್‌ಕುಮಾರ್, ಮೋಹಿತ್ ಮತ್ತು ಮನುದೀಪ್, ಯೋಜನಾ ನಿರ್ದೇಶಕ, ಎಂಜಿನಿಯರ್, ಸುರಕ್ಷತಾ ಅಧಿಕಾರಿ, ಕ್ರೇನ್ ಆಪರೇಟರ್ ಮತ್ತು ಕಾರ್ಮಿಕರ ವಿರುದ್ಧ ಎಎಸ್‌ಐ ಪುತ್ರ ರುಷಭ್ ದೂರು ದಾಖಲಿಸಿದ್ದಾರೆ.

- Advertisement -

Related news

error: Content is protected !!