![G L Acharya G L Acharya](https://vtvvitla.com/wp-content/uploads/2023/07/gl_acharya.jpeg)
![panikkar panikkar](https://vtvvitla.com/wp-content/uploads/2020/07/panikkar.jpeg)
![](https://vtvvitla.com/wp-content/uploads/2021/10/indane-gas-1024x606.jpg)
![](https://vtvvitla.com/wp-content/uploads/2024/06/karaate-M-682x1024.jpeg)
![](https://vtvvitla.com/wp-content/uploads/2024/04/vigneshwara-new-683x1024.jpeg)
ಉಜಿರೆ : ಸಾಲ ವಾಪಸ್ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ.
ಧರ್ಮಸ್ಥಳದ ರೂಪಾ ಎಂಬ ಮಹಿಳೆ, ನವೀನ್ ಕನ್ಯಾಡಿ ಎಂಬಾತನಿಗೆ 7 ಲಕ್ಷ ರೂ ಸಾಲ ನೀಡಿದ್ದರು. ಅದೇ ಹಣವನ್ನು ವಾಪಸ್ ಕೇಳಿದ್ದಕ್ಕೆ ಮಹಿಳೆ ರೂಪಾ ಮೇಲೆ ಬಟ್ಟೆ ಅಂಗಡಿಗೆ ನುಗ್ಗಿ ಹೂವಿನ ವ್ಯಾಪಾರಿಯಾದ ನವೀನ್ ಹಲ್ಲೆ ಮಾಡಿದ್ದಾನೆ.
ಉಜಿರೆಯಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದ ಧರ್ಮಸ್ಥಳದ ಮಹಿಳೆ ರೂಪಾ, ಇದೀಗ ಗಾಯಗೊಂಡು ಉಜಿರೆಯ ಎಸ್ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ನವೀನ್ ಕನ್ಯಾಡಿ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೊಳಾಗಾದ ಮಹಿಳೆ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 354,447,504,506 ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾರ್ಯಾಚರಣೆ ನಡೆಸಿ ಆರೋಪಿ ನವೀನ್ ಕನ್ಯಾಡಿಯನ್ನು ಬಂಧಿಸಿ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪೂರ್ ಮರ್ ನೇತೃತ್ವದ ಪೊಲೀಸರ ತಂಡ ವಿಚಾರಣೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.