Wednesday, May 22, 2024
spot_imgspot_img
spot_imgspot_img

ಜಮೀನು ವಿಚಾರವಾಗಿ ಚಲನಚಿತ್ರ ನಟಿ ಅನಿತಾ ಗೌಡ ಮೇಲೆ ಹಲ್ಲೆ

- Advertisement -G L Acharya panikkar
- Advertisement -

ಜಮೀನು ವಿಚಾರವಾಗಿ ನಡೆದ ಗಲಾಟೆಯಲ್ಲಿ ಕಿರುತೆರೆ ಹಾಗೂ ಚಲನಚಿತ್ರ ನಟಿ ಅನಿತಾ ಗೌಡ ಮೇಲೆ ಹಲ್ಲೆ ನಡೆದಿದ್ದು, ನಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವಮೊಗ್ಗದ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದ ಬಳಿ ಘಟನೆ ನಡೆದಿದೆ.

ಸಾಗರ ತಾಲೂಕಿನ ಉಳ್ಳೂರು ಗ್ರಾ.ಪಂ ವ್ಯಾಪ್ತಿಯ ಕಾಸ್ಪಾಡಿ ಗ್ರಾಮದಲ್ಲಿ ಜಮೀನಿನ ವಿಚಾರದಲ್ಲಿ ಸ್ಥಳೀಯ ನಿವಾಸಿಗಳಾದ ನೀಲಮ್ಮ ಮತ್ತು ಮೋಹನ್ ಎನ್ನುವರು ಅನುಗೌಡ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸಾಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಟಿ ಅನಿತಾ ಗೌಡ ಕಾಸ್ಪಾಡಿ ಗ್ರಾಮದ ಸ.ನಂ 43 ರಲ್ಲಿ ಜಮೀನು ಹೊಂದಿದ್ದಾರೆ. ನಟಿ ಅನಿತಾಗೌಡ ಕಳೆದ ಶುಕ್ರವಾರ ಸಹ ಕಾಸ್ಪಾಡಿಗೆ ಬಂದಿದ್ದರು. ಜಮೀನಿಗೆ ತೆರಳಿದ್ದ ವೇಳೆ ಮೋಹನ್, ನೀಲಮ್ಮ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದಾರೆ. ಸಾಗರದ ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!