Monday, April 29, 2024
spot_imgspot_img
spot_imgspot_img

ಬಹರೈನ್‌ನಲ್ಲಿ‌ ನೆಲೆಸಿದ್ದ ಪುತ್ತೂರು ಮೂಲದ ನೃತ್ಯ ಗುರು ವಿ. ಆಸ್ತಿಕಾ ಸುನಿಲ್ ಶೆಟ್ಟಿ ವಿಧಿವಶ

- Advertisement -G L Acharya panikkar
- Advertisement -

ಪುತ್ತೂರು : ಖ್ಯಾತ ನೃತ್ಯ ಗುರು ವಿದ್ವಾನ್ ದಿ. ಕುದ್ಕಾಡಿ ವಿಶ್ವನಾಥ ರೈ ಮತ್ತು ವಿದುಷಿ ನಯನಾ ವಿ ರೈ ದಂಪತಿಗಳ ಪುತ್ರಿ ಕುದ್ಕಾಡಿ ನಿವಾಸಿ, ಬಹರೈನ್ ನಲ್ಲಿ ನೆಲೆಸಿದ್ದ ನೃತ್ಯ ವಿದುಷಿ ಆಸ್ತಿಕಾ ಸುನಿಲ್ ಶೆಟ್ಟಿ (46) ಮಾ.7 ರಂದು ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಮೃತರು ಪತಿ, ಪುತ್ರನನ್ನು ಅಗಲಿದ್ದಾರೆ.

ಕಲಾವಿದರ ಕುಟುಂಬದಲ್ಲಿ ಜನಿಸಿದ ಆಸ್ತಿಕಾ ರೈ ಪದಡ್ಕ ವಿಶ್ವಕಲಾನಿಕೇತನದಲ್ಲಿ ಕಲಿತು ನೃತ್ಯ, ಯಕ್ಷಗಾನದಲ್ಲಿ ಪಳಗಿದ್ದರು. ಭರತನಾಟ್ಯ ಕಲಾವಿದೆಯಾಗಿ, ಯಕ್ಷಗಾನ ಕಲಾವಿದೆಯಾಗಿ ಬಹರೈನ್ ದೇಶದಲ್ಲಿ ಸುದೀರ್ಘ ಕಾಲ ಕಲಾಸರಸ್ವತಿಯನ್ನು ಆರಾಧಿಸುತ್ತಾ ಬಂದಿದ್ದರು.

ಬಹರೈನ್ ಯಕ್ಷಗಾನ ರಂಗದಲ್ಲಿ ಅವರು ಸುಧನ್ವಮೋಕ್ಷದ ಕೃಷ್ಣನಾಗಿ, ಕೋಟಿಚೆನ್ನಯದ ಕಿನ್ನಿದಾರುವಾಗಿ, ಶಾಂಭವಿವಿಲಾಸದ ಶಾಂಭವಿಯಾಗಿ ಮೊದಲಾದಿ ಪಾತ್ರಗಳಿಗೆ ಜೀವ ತುಂಬಿ ಅಭಿನಯಿಸಿದ್ದರು. ಪುತ್ತೂರಿನಲ್ಲಿ ಇರುವಾಗ ತಂದೆ ವಿದ್ವಾನ್ ವಿಶ್ವನಾಥ ರೈ ಹಾಗೂ ತಾಯಿ ವಿದುಷಿ ನಯನಾ ವಿ ರೈ ಅವರೊಂದಿಗೆ ನೃತ್ಯ ರಂಗದಲ್ಲಿ ಗುರುತಿಸಿಕೊಂಡಿದ್ದರು.

- Advertisement -

Related news

error: Content is protected !!