Friday, April 26, 2024
spot_imgspot_img
spot_imgspot_img

ಭಾ ಜ ಪಾ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಸ್ಮರಣ ಕಾರ್ಯಕ್ರಮ

- Advertisement -G L Acharya panikkar
- Advertisement -

ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮರಣ ಕಾರ್ಯಕ್ರಮ , ರಕ್ತದಾನ ಶಿಬಿರ ಹಾಗೂ ಹಿರಿಯ ರೈತರಿಗೆ ಸನ್ಮಾನ ಕಾರ್ಯಕ್ರಮ ಬಿಜೆಪಿ ಕಾರ್ಯಾಲಯದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಶಾಸಕರಾದ ಶ್ರೀ ವೇದವ್ಯಾಸ್ ಕಾಮತ , ಮಾಜಿ ಶಾಸಕರಾದ ಶ್ರೀ ಯೋಗೀಶ್ ಭಟ್ ,ಮನಪಾ ಮೇಯರ್ ಶ್ರೀ ದಿವಾಕರ್ ಪಾಂಡೇಶ್ವರ್ , ಮನಪಾ ಉಪ ಮೇಯರ್ ಶ್ರೀಮತಿ ವೇದಾವತಿ , ಬಿಜೆಪಿ ರಾಜ್ಯ ಪಂಚಾಯತ್ ರಾಜ್ ಪ್ರಕೋಷ್ಠದ ಸಹ ಸಂಚಾಲಕರಾದ ಪ್ರೇಮಾನಂದ ಶೆಟ್ಟಿ .ಮೂಡಾ ಅಧ್ಯಕ್ಷರಾದ ಶ್ರೀ ರವಿಶಂಕರ್ ಮಿಜಾರ್ , ಮಂಗಳೂರು ದಕ್ಷಿಣ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ,ಶ್ರೀ ಸುರೇಂದ್ರ ಜೆ , ಶ್ರೀಮತಿ ರೂಪ ಡಿ ಬಂಗೇರ, ಉಪಾಧ್ಯಕ್ಷರಾದ ಶ್ರೀ ಭಾಸ್ಕರಚಂದ್ರ ಕೆ , ಶ್ರೀ ರಮೇಶ್ ಕಂಡೆಟ್ಟು, ಶ್ರೀ ರಮೇಶ್ ಹೆಗ್ಡೆ ಮನಪಾ ಸದ್ಯಸರು ಹಾಗೂ ಬಿಜೆಪಿ ಮಂಗಳೂರು ದಕ್ಷಿಣ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು .

ಈ ಸಂದರ್ಭದಲ್ಲಿ ಹಲವು ಬಾರಿ ರಕ್ತದಾನ ಮಾಡಿರುವ ಬಿಜೆಪಿ ದಕ್ಷಿಣ ಮಂಡಲ ಉಪಾಧ್ಯಕ್ಷರಾದ ಶ್ರೀ ರಮೇಶ್ ಹೆಗ್ಡೆ ಹಾಗೂ ಮನಪಾ ಸದ್ಯಸರು ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಜಗದೀಶ್ ಶೆಟ್ಟಿಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ ,ಹಲವು ಕಾರ್ಯಕರ್ತರು ರಕ್ತದಾನವನ್ನು ಮಾಡಿದರು, ಹಲವು ಹಿರಿಯ ರೈತರಿಗೆ ಸನ್ಮಾನವನ್ನು ಇದೆ ವೇಳೆಯಲ್ಲಿ ಮಾಡಲಾಯಿತು.

- Advertisement -

Related news

error: Content is protected !!