- Advertisement -
- Advertisement -
ಕುರಾನ್ ಓದಲು ಬರುತಿದ್ದ ಅಪ್ರಾಪ್ತ ಬಾಲಕನ ಮೇಲೆ ಮೌಲ್ವಿಯೊಬ್ಬ ಮಸೀದಿಯಲ್ಲಿ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಅಬ್ಬುಲ್ ಸಮದ್ ಜಿಯಾಯಿ ಬಂಧಿತ ಮೌಲ್ವಿಯಾಗಿದ್ದು, ರಾತ್ರಿ ಖುರಾನ್ ಓದಲು ಮಸೀದಿಗೆ ತೆರಳಿದ್ದ ಬಾಲಕನ ಬಟ್ಟೆ ಬಿಚ್ಚಿ ಬಳಿಕ ಗುಪ್ತಾಂಗ ಸ್ಪರ್ಶಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಘಟನೆ ಕುರಿತು ಬಾಲಕನ ತಂದೆಯ ದೂರಿನನ್ವಯ ಮೌಲ್ವಿಯನ್ನು ಕುಮಟಾ ಠಾಣೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
- Advertisement -