- Advertisement -
- Advertisement -
ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ಯುವಕನೋರ್ವನ ಮೇಲೆ ದರೋಡೆಕೋರರು ಹಲ್ಲೆಗೈದು ದೋಚಲು ಪ್ರಯತ್ನಿಸಿದ ಘಟನೆ ಪುಲಿಕೇಶಿನಗರ ಪೊಲೀಸ್ ಠಾಣಾ ವ್ತಾಪ್ತಿಯಲ್ಲಿ ನಡೆದಿದೆ.
ಗಾಯಗೊಂಡ ವ್ಯಕ್ತಿ ಅಸ್ಸಾಂ ಮೂಲದ ಮನೋಜ್ ಎಂದು ಗುರುತಿಸಲಾಗಿದೆ.
ಹೊಟೇಲ್ವೊಂದರಲ್ಲಿ ಕೆಲಸ ಮುಗಿಸಿ ಯುವಕ ತೆರಳುತ್ತಿದ್ದ ವೇಳೆ ಬೈಕ್ನಲ್ಲಿ ಬಂದ ದರೋಡೆಕೋರರು ಮಾರಕ ಆಯುಧವನ್ನು ಹಿಡಿದು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಪುಂಡರ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ.
- Advertisement -