Monday, April 29, 2024
spot_imgspot_img
spot_imgspot_img

ವಿಟ್ಲ: ಬಿಜೆಪಿ, ಬಜರಂಗದಳ ಕಾರ್ಯಕರ್ತರ‌ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

- Advertisement -G L Acharya panikkar
- Advertisement -

ಪುತ್ತೂರು: ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಮತ್ತು ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯಕ್ ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ.

ಹಲ್ಲೆ ನಡೆಸಿದವರನ್ನು ಮಂಗಳೂರು ನಿವಾಸಿಯಾದ ರಾಕೇಶ್, ಮಾಣಿ ಮಂಜುನಾಥ ಯಾನೆ ಮಂಜು, ಪ್ರವೀಣ್ ನಾಯ್ಕ ಅಲಿಯಾಸ್ ಮಹಾಲಿಂಗ ಎಂದು ಶಂಕಿಸಲಾಗಿದೆ. ಕೆಲ ದಿನಗಳ ಹಿಂದೆ ಮಾಣಿಯಲ್ಲಿ ನಡೆದ ಚುನಾವಣಾ ವಿಜಯೋತ್ಸವದ ವೇಳೆ ಇತ್ತಂಡಗಳ ನಡುವೆ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದ್ದು, ಇದೇ ಕಾರಣಕ್ಕೆ ಹಲ್ಲೆ ನಡೆದಿದೆ ಎನ್ನಲಾಗಿದೆ.

ಮಾಣಿ ಜಂಕ್ಷನ್ ನಲ್ಲಿ ದ್ವಿಚಕ್ರ ವಾಹನದಲ್ಲಿ ಪ್ರಶಾಂತ್ ಮತ್ತು ಮಹೇಂದ್ರ ತೆರಳುತ್ತಿದ್ದ ವೇಳೆ ಒಮ್ಮಿ ಕಾರಿನಲ್ಲಿ ಬಂದ ತಂಡ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಬಳಿಕ ಹಲ್ಲೆ ನಡೆಸಿದೆ. ಘಟನೆಯಲ್ಲಿ ಪ್ರಶಾಂತ್ ಹಾಗೂ ಮಹೇಂದ್ರರ ತಲೆ ಮತ್ತು ಕಾಲಿಗೆ ಗಾಯವಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!