- Advertisement -
![G L Acharya G L Acharya](https://vtvvitla.com/wp-content/uploads/2023/07/gl_acharya.jpeg)
![panikkar panikkar](https://vtvvitla.com/wp-content/uploads/2020/07/panikkar.jpeg)
- Advertisement -
![](https://vtvvitla.com/wp-content/uploads/2023/11/mgr-corporation-796x1024.jpeg)
![](https://vtvvitla.com/wp-content/uploads/2023/10/baby-sitting-new-853x1024.jpeg)
ಮಂಗಳೂರು : ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯನ್ನು ಆಧರಿಸಿ ಉಳ್ಳಾಲ ಠಾಣೆಯ ಇನ್ ಸ್ಪೆಕ್ಟರ್ ಬಾಲಕೃಷ್ಣ ನೇತೃತ್ವದ, ಪೊಲೀಸರು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಸಹಯೋಗದಲ್ಲಿ ದಾಳಿ ನಡೆಸಿದ ಘಟನೆ ಇಂದು ಬೆಳಗ್ಗೆ ಹರೇಕಳ ಪಾವೂರು ಬಳಿ ನಡೆದಿದೆ.
ನಾಡ ದೋಣಿಗಳಲ್ಲಿ ಮರಳು ಸಾಗಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಹಾಗೂ ಭೂಗಣಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮರಳು ಮಾಫಿಯಾದವರು ದೋಣಿಗಳ ಮೂಲಕ ನದಿಯಿಂದ ಮರಳು ತೆಗೆದು ಸ್ಥಳೀಯ ಮನೆಗಳಿಗೆ ಪೂರೈಸುತ್ತಿದ್ದರು. ದಾಳಿ ವೇಳೆ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಕಾರ್ಯಾಚರಣೆ ನಡೆಸಿದ ಅಧಿಕಾರಿಗಳ ತಂಡ ಮರಳು ಸಹಿತ ನಾಲ್ಕು ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ.
- Advertisement -