- Advertisement -
- Advertisement -
ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು- ದಯಾನಂದ ಶೆಟ್ಟಿ ಉಜಿರೆಮಾರು ಆಗ್ರಹ




ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಕಾಸರಗೋಡು ಬಳಿ ನಡೆದಿದೆ.
ಈ ಘಟನೆಯ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸಿದ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ” ಹಿಂದೂ ಸಮಾಜ ಪೂಜನೀಯ ಭಾವನೆಯಲ್ಲಿ ಕಾಣುವ ಎಡನೀರು ಸಂಸ್ಥಾನದ ಶ್ರೀಗಳ ವಾಹನವನ್ನು ಅಡ್ಡಗಟ್ಟಿ ದಾಳಿ ಮಾಡಿರುವುದು ಹಿಂದೂ ಸಮಾಜದ ಭಾವನೆಯನ್ನು ಕೆರಳಿಸಿರುವುದಾಗಿದೆ. ಕೇರಳ ರಾಜ್ಯಾದ್ಯಂತ ನಡೆಯುವ ಇಂತಹ ಘಟನೆಗಳು ಕೇರಳದಲ್ಲಿನ ಪಿಣರಾಯಿ ಸರಕಾರದ ಹಿಂದೂ ವಿರೋಧಿ ಧೋರಣೆಗೆ ಹಿಡಿದ ಕೈಗನ್ನಡಿಯಾಗಿದೆ. ಈ ಘಟನೆಯನ್ನು ಭಾರತೀಯ ಜನತಾ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ. ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
- Advertisement -