Sunday, June 29, 2025
spot_imgspot_img
spot_imgspot_img

ಎಡನೀರು ಸಂಸ್ಥಾನದ ಶ್ರೀಗಳ ಕಾರಿನ ಮೇಲೆ ದಾಳಿ -ದುಷ್ಕರ್ಮಿಗಳ ವಿರುದ್ಧ ತಕ್ಷಣ ಕ್ರಮಕ್ಕೆ ಒತ್ತಾಯಿಸಿ ಕೇರಳ ಸಿಎಂಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಪತ್ರ

- Advertisement -
- Advertisement -

ಮಂಗಳೂರು:ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ತೀರ್ಥ ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವುದನ್ನು ಖಂಡಿಸಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ, ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದಾರೆ.

ಎಡನೀರು ಮಠದ ಶ್ರೀಗಳು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಭಾನುವಾರ ದುಷ್ಕರ್ಮಿಗಳು ದಾಳಿ ನಡೆಸಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಸಂಸದರು, ” ಹಿಂದೂ ಸಮಾಜದ ಮಾರ್ಗದರ್ಶಕರು ಹಾಗೂ ಆಧ್ಯಾತ್ಮಿಕ ಗುರುಗಳಾದ ಎಡನೀರು ಶ್ರೀಗಳ ಮೇಲೆ ಹಲ್ಲೆ ನಡೆಸಿರುವ ಘಟನೆಯು ಈ ಪ್ರದೇಶದ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಕಾನೂನಿನ ಭಯವಿಲ್ಲದೆ ನಡುರಸ್ತೆಯಲ್ಲಿಯೇ ಅತ್ಯಂತ ಗೌರವಯುತ ಸ್ಥಾನದಲ್ಲಿರುವ ಸ್ವಾಮೀಜಿ ಕಾರನ್ನು ತಡೆದು ನಿಲ್ಲಿಸಿ ರೌಡಿಸಂ ತೋರಿಸಿ ಸಮಾಜದಲ್ಲಿ ಭೀತಿ ಸೃಷ್ಟಿಸುವ ಇಂತಹ ಪುಂಡರನ್ನು ತಕ್ಷಣ ಮಟ್ಟಹಾಕಬೇಕು” ಎಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

“ಕಾಸರಗೋಡಿನ ಗಡಿಯನ್ನು ಹಂಚಿಕೊಳ್ಳುವ ಮಂಗಳೂರಿನ (ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ) ಸಂಸದನಾಗಿ ಮತ್ತು ಸ್ವಾಮೀಜಿಯವರ ಮೇಲೆ ಅತೀವ ಗೌರವ ಹೊಂದಿರುವ ವ್ಯಕ್ತಿಯಾಗಿ, ಈ ಕೃತ್ಯದಲ್ಲಿ ಶಾಮೀಲಾದವರ ವಿರುದ್ಧ ತಕ್ಷಣ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಗೃಹ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕೆಂದು” ಸಿಎಂ ಪಿಣರಾಯಿ ವಿಜಯನ್‌ಗೆ ಒತ್ತಾಯಿಸಿದ್ದಾರೆ.

- Advertisement -

Related news

error: Content is protected !!