Sunday, May 19, 2024
spot_imgspot_img
spot_imgspot_img

ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ರೌಡಿಶೀಟರ್ ಬರ್ಬರ ಹತ್ಯೆ

- Advertisement -G L Acharya panikkar
- Advertisement -

ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ರೌಡಿಶೀಟರ್‌ನೊಬ್ಬನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ತಲಘಟ್ಟಪುರದ ಚಿಕ್ಕೆಗೌಡನ ಪಾಳ್ಯದಲ್ಲಿ ನಡೆದಿದೆ.

ಗಾಳಪ್ಪ ಅಲಿಯಾಸ್​​ ಹುಚ್ಚುಗಾಳ ಕೊಲೆಯಾದ ರೌಡಿ ಶೀಟರ್. ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.

ಮೃತ ಗಾಳಪ್ಪ ಅಲಿಯಾಸ್ ಹುಚ್ಚುಗಾಳ ಈ ಹಿಂದೆ ಎರಡು ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಈತನ ವಿರುದ್ಧ ಕೆಂಗೇರಿ ಹಾಗೂ ತಾವರೆಕೆರೆ ಪೊಲೀಸ್ ಠಾಣೆಗಳಲ್ಲಿ ರೌಡಿಪಟ್ಟಿ ತೆರೆಯಲಾಗಿತ್ತು.ಜನವರಿ 28ರಂದು ವೈಯಕ್ತಿಕ ಕೆಲಸ ಇದ್ದ ಹಿನ್ನೆಲೆ, ಚಿಕ್ಕೆಗೌಡನ ಪಾಳ್ಯಕ್ಕೆ ಗಾಳಪ್ಪ ಬಂದಿದ್ದ. ಈ ವೇಳೆ, ಗಾಳಪ್ಪನ ಮೇಲೆ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದೆ. ಸ್ಥಳಕ್ಕೆ ತಲಘಟ್ಟಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

https://youtube.com/watch?v=9YCypf5M8Lc&feature=shared
- Advertisement -

Related news

error: Content is protected !!