- Advertisement -
- Advertisement -
ಬಂಟ್ವಾಳ : ಅಕ್ರಮವಾಗಿ ನೇತ್ರಾವತಿ ನದಿಯಿಂದ ಮರಳು ತೆಗೆಯಲು ಯತ್ನಿಸುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಬಂಟ್ವಾಳ ನಗರ ಠಾಣೆ ಪೊಲೀಸರು ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕು, ಬಾಳ್ತಿಲ ಗ್ರಾಮದಲ್ಲಿ ನಡೆದಿದೆ.
ದಿನಾಂಕ.17-04-2024 ರಂದು ರಾತ್ರಿ, ಬಂಟ್ವಾಳ ತಾಲೂಕು, ಬಾಳ್ತಿಲ ಗ್ರಾಮದಲ್ಲಿ, ಆರೋಪಿಗಳು, ನೇತ್ರಾವತಿ ನದಿಯಿಂದ ಮರಳು ತೆಗೆಯುತ್ತಿರುವ ಬಗ್ಗೆ ಬಂದ ಮಾಹಿತಿ ಬಂದ ಮೇರೆಗೆ, ಸ್ಥಳಕ್ಕೆ ರಾಮಕೃಷ್ಣ ಪಿ ಎಸ್ ಐ (ಕಾ&ಸು) ಬಂಟ್ವಾಳ ನಗರ ಠಾಣೆರವರು ಸಿಬ್ಬಂದಿಗಳೊಂದಿಗೆ ತೆರಳಿದಾಗ, ಆರೋಪಿಗಳು ತಪ್ಪಿಸಿಕೊಂಡಿದ್ದಾರೆ.
ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ:- 75/2024, ಕಲಂ: 379, 511 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
- Advertisement -