Sunday, June 29, 2025
spot_imgspot_img
spot_imgspot_img

ಸಿನಿಮಾ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ತಾಂಡವ್ ರಾಮ್ ಬಂಧನ..!

- Advertisement -
- Advertisement -

ಬೆಂಗಳೂರು: ‘ಮುಗಿಲ್ ಪೇಟೆ’ ಸಿನಿಮಾ ನಿರ್ದೇಶಕ ಭರತ್ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ ಆರೋಪದ ಮೇರೆಗೆ ನಟ ತಾಂಡವ್ ರಾಮ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಚಂದ್ರಾ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. ನಿರ್ದೇಶಕ ಭರತ್ ಸಿನಿಮಾವೊಂದನ್ನು ನಿರ್ದೇಶಿಸುತ್ತಿದ್ದು, ಅದರಲ್ಲಿ ತಾಂಡವ್ ರಾಮ್ ಕೂಡ ನಟಿಸುತ್ತಿದ್ದರು. ಆದರೆ ಆ ಸಿನಿಮಾವನ್ನು ಭರತ್ ಅರ್ಧಕ್ಕೆ ನಿಲ್ಲಿಸಿದ ಕಾರಣ ಸಿಟ್ಟಾಗಿ ತಾಂಡವ್ ರಾಮ್, ನಿರ್ದೇಶಕ ಭರತ್‌ಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ. ಜೊತೆಗೆ ಒಂದು ಸುತ್ತು ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಭರತ್ ಪೊಲೀಸರಿಗೆ ದೂರು ನೀಡಿದ್ದು, ತಾಂಡವ್ ರಾಮ್ ಅವರನ್ನು ಬಂಧಿಸಲಾಗಿದೆ.

ಆರೋಪಿ ತಾಂಡವ್ ರಾಮ್ ‘ಜೋಡಿಹಕ್ಕಿ’, ‘ಭೂಮಿಗೆ ಬಂದ ಭಗವಂತ’ ಧಾರಾವಾಹಿಗಳಲ್ಲಿ ನಟಿಸಿದ್ದರು. ಜೊತೆಗೆ ಕೆಎಂ ಚೈತನ್ಯ ಅವರ ‘ಅಬ್ಬಬ್ಬ’ ಸಿನಿಮಾದಲ್ಲಿಯೂ ನಟಿಸಿದ್ದಾರೆ. ತಾಂಡವ್ ರಾಮ್ ನಾಯಕನಾಗಿ ನಟಿಸುತ್ತಿದ್ದ ‘ದೇವನಾಂಪ್ರಿಯ’ ಹೆಸರಿನ ಸಿನಿಮಾ ಸೆಟ್ಟೇರಿತ್ತು. ಈ ಸಿನಿಮಾವನ್ನು ನಿರ್ದೇಶಕ ಭರತ್ ನಿರ್ದೇಶಿಸುತ್ತಿದ್ದರು. ಆದರೆ ಈ ಸಿನಿಮಾವನ್ನು ಭರತ್ ಅರ್ಧಕ್ಕೆ ನಿಲ್ಲಿಸಿದ್ದರಂತೆ. ಹೀಗಾಗಿ ನಟ ತಾಂಡವ್ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.

ಇದೀಗ ನಟ ತಾಂಡವ್ ರಾಮ್ ಅನ್ನು ಕೊಲೆ ಯತ್ನ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಪರವಾನಗಿ ಹೊಂದಿದ್ದ ಅವರ ಬಂದೂಕನ್ನು ಸಹ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

Related news

error: Content is protected !!