Monday, April 29, 2024
spot_imgspot_img
spot_imgspot_img

ಅಪ್ರಾಪ್ತೆಯನ್ನು ಪುಸಲಾಯಿಸಿ ಆಟೋದಲ್ಲಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನ..!

- Advertisement -G L Acharya panikkar
- Advertisement -

ಹಾಡಹಗಲೇ ಆಟೋ ಚಾಲಕನೊಬ್ಬ ಏಳು ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಆರೋಪಿಯನ್ನು ಸೈಯದ್ (40) ಎಂದು ಗುರುತಿಸಲಾಗಿದ್ದು, ಈತ ತುಮಕೂರಿನ ಶಾಂತಿನಗರದ ಗೂಡ್ ಶೆಡ್ ಕಾಲೋನಿ ನಿವಾಸಿ.

ಆಟೋ ಚಾಲಕನಾಗಿರುವ ಆರೋಪಿ ಸೈಯದ್, ಮಧ್ಯಾಹ್ನ 1 ಗಂಟೆ ಸುಮಾರಿಗೆ ಬಸ್ ನಿಲ್ದಾಣದ ಬಳಿ ಓಡಾಡುತ್ತಿದ್ದ ಏಳು ವರ್ಷದ ಬಾಲಕಿಯನ್ನ ಪುಸಲಾಯಿಸಿ, ಬಳಿಕ ತನ್ನ ಆಟೋದಲ್ಲಿ ನಿರ್ಜನಕ್ಕೆ ಪ್ರದೇಶಕ್ಕೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಸೈಯದ್ ಬಾಲಕಿಯನ್ನು ಕರೆದೊಯ್ದಿರುವ ವಿಚಾರ ತಿಳಿದು ಸಾರ್ವಜನಿಕರು ಆತನನ್ನು ಹಿಂಬಾಲಿಸಿ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಬಾಲಕಿಯನ್ನು ರಕ್ಷಿಸಿ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಬಾಲಕಿ ಅನಾಥಳಾಗಿದ್ದು, ತುಮಕೂರಿನ ರೈಲ್ವೆ ಸ್ಟೇಷನ್, ಬಸ್ ನಿಲ್ದಾಣದಲ್ಲಿ ಭಿಕ್ಷೆ ಬೇಡಿಕೊಂಡು ಓಡಾಡುತ್ತಿದ್ದಳು ಎನ್ನಲಾಗಿದೆ.

- Advertisement -

Related news

error: Content is protected !!