Thursday, May 9, 2024
spot_imgspot_img
spot_imgspot_img

ವರ್ಗಾವಣೆ ವಿಚಾರವಾಗಿ ಮಾತನಾಡಲು ಕರೆಸಿಕೊಂಡು ಅತ್ಯಾಚಾರಕ್ಕೆ ಯತ್ನ; ಟಿಹೆಚ್​ಒಗೆ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

- Advertisement -G L Acharya panikkar
- Advertisement -
vtv vitla

ವರ್ಗಾವಣೆ ವಿಚಾರವಾಗಿ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಮಾತನಾಡಲು ಮನೆಗೆ ಕರೆಸಿಕೊಂಡ ವೈದ್ಯಾಧಿಕಾರಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಸ್ಥಳೀಯರು ಹಿಡಿದು ಧರ್ಮದೇಟು ನೀಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದೆ

ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ವರ್ಗಾವಣೆ ವಿಚಾರವಾಗಿ ಟಿಹೆಚ್​ಒ ಡಾ.ಎಲ್ಡೋಸ್ ಟಿ.ವರ್ಗೀಸ್ ಎನ್ನುವಾತ ಮಾತನಾಡಲೆಂದು ತಾನು ವಾಸವಿದ್ದ ಕ್ವಾಟ್ರಸ್​ಗೆ ಕರೆಸಿಕೊಂಡು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳಾ ಸಿಬ್ಬಂದಿ ಆತನಿಂದ ತಪ್ಪಿಸಿಕೊಂಡು ಬಂದು ಸ್ಥಳೀಯರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಸ್ಥಳೀಯರು ಹೋಗಿ ಟಿಹೆಚ್​ಒಗೆ ಧರ್ಮದೇಟು ನೀಡಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಎನ್.ಆರ್.ಪುರ ಸರ್ಕಾರಿ ಆಸ್ಪತ್ರೆಯ ಡಿ ದರ್ಜೆ ಮಹಿಳಾ ಸಿಬ್ಬಂದಿ ಇತ್ತೀಚೆಗೆ ಕಳಸ ಆಸ್ಪತ್ರೆಗೆ ವರ್ಗಾವಣೆಯಾಗಿದ್ದರು. ಈ ಸಂಬಂಧ ಮಾತನಾಡುವ ಬಗ್ಗೆ ಸರ್ಕಾರಿ ನಿವಾಸಕ್ಕೆ ಕರೆಯಿಸಿಕೊಂಡು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇನ್ನು THO ಡಾ.ಎಲ್ಡೋಸ್ ಟಿ.ವರ್ಗೀಸ್, ಡಿ ದರ್ಜೆ ನೌಕರಳ ಜೊತೆ ಅಸಭ್ಯವಾಗಿ ಮಾತನಾಡಿದ ಆಡಿಯೋ, ವಾಟ್ಸಪ್ ಸ್ಕ್ರೀನ್ ಶಾಟ್ ವೈರಲ್‌ ಆಗಿದೆ.

ಈ ಸಂಬಂಧ ಬಾಳೆಹೊನ್ನೂರು ಠಾಣೆಯ ಪೊಲೀಸರು ಎನ್ ಅರ್ ಪುರ ತಾಲೂಕು ವೈದ್ಯಾಧಿಕಾರಿ ಡಾ.ಎಲ್ಡೋಸ್ ಟಿ.ವರ್ಗೀಸ್ ನನ್ನು ಬಂಧಿಸಿದ್ದು, ಅತ್ಯಾಚಾರಕ್ಕೆ ಯತ್ನ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ.

- Advertisement -

Related news

error: Content is protected !!