- Advertisement -
- Advertisement -
ಬಂಟ್ವಾಳ :ದ್ವಿಚಕ್ರ ವಾಹನಕ್ಕೆ ಆಟೋ ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ.
ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ.
ಮನೆಯಿಂದ ಬಿಸಿರೋಡು ಕಡೆಗೆ ಸ್ಕೂಟರ್ ನಲ್ಲಿ ಸಹಸವಾರನಾಗಿ ಪವನ್ ಹೋಗುತ್ತಿದ್ದ ವೇಳೆ ನರಿಕೊಂಬು ದಿಂಡಿಗೆ ಎಂಬಲ್ಲಿ ರಿಕ್ಷಾ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪವನ್ ಬಿ.ಮೂಡ ಕಾಲೇಜಿನ ಪ್ರಥಮ ಪಿಯುಸಿ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿಯಾಗಿ ಗುರುತಿಸಿಕೊಂಡಿದ್ದನು.
ಘಟನೆಯಿಂದ ರಿಕ್ಷಾ ಚಾಲಕ ಸಜೀಪ ನಿವಾಸಿ ಜಾಬೀರ್ ಕೂಡ ಗಾಯಗೊಂಡಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -