- Advertisement -
- Advertisement -
ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ಘೋಷಣೆ ಮಾಡಿರುವ ಪರಿಹಾರದ ಹಣ ಪಡೆಯಲು ಇಂದಿನಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ ಎಂದು ಹೇಳಲಾಗಿದೆ.
ಇಂದು ಬೆಳಗ್ಗೆ 11 ಗಂಟೆಯ ನಂತರ ಸೇವಾಸಿಂಧೂ ಅಪ್ಲಿಕೇಶನ್ ಓಪನ್ ಆಗಲಿದೆ. ಫಲಾನುಭವಿಗಳು https://sevasindhu.karnataka.gov.in/sevasindhu/kannada ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಇದಲ್ಲದೆ ಸಮೀಪದ ಗ್ರಾಹಕ ಸೇವಾ ಕೇಂದ್ರ (CSC)ಕ್ಕೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದಾಗಿದೆ.
ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್, ಆಟೋ ಚಾಲಕರಿಗೆ 3 ಸಾವಿರ ರೂ. ಪರಿಹಾರ ಹಣವನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಅರ್ಜಿ ಸಲ್ಲಿಸಿದ ಪ್ರತಿಯೊಬ್ಬರಿಗೂ ಪರಿಹಾರ ಹಣ ನೀಡಲಾಗುವುದು ಎಂದು ಸರ್ಕಾರ ಹೇಳಿದೆ.
ಎಲ್ಲಾ ಪ್ರಕ್ರಿಯೆ ಆನ್ ಲೈನ್ ನಲ್ಲೇ ನಡೆಯಲಿದ್ದು, ವಾಹನ ಸಂಖ್ಯೆ, ಡಿಲ್ ಸಂಖ್ಯೆ ನಮೂದಿಸಬೇಕಿದೆ. ಒಬ್ಬರು ಒಂದು ಅರ್ಜಿ ಮಾತ್ರ ಸಲ್ಲಿಸಬಹುದಾಗಿದೆ.
https://sevasindhu.karnataka.gov.in/sevasindhu/kannada
- Advertisement -