- Advertisement -
![G L Acharya G L Acharya](https://vtvvitla.com/wp-content/uploads/2023/07/gl_acharya.jpeg)
![panikkar panikkar](https://vtvvitla.com/wp-content/uploads/2020/07/panikkar.jpeg)
- Advertisement -
![](https://vtvvitla.com/wp-content/uploads/2023/10/baby-sitting-new-853x1024.jpeg)
![](https://vtvvitla.com/wp-content/uploads/2023/09/Bajaj-add-1024x718.jpg)
![](https://vtvvitla.com/wp-content/uploads/2023/10/shimmer-1024x1024.jpeg)
ಪುತ್ತೂರು: ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನರಿಮೊಗರು ಗ್ರಾಮದ ಪುರುಷರಕಟ್ಟೆ ನಿವಾಸಿ ಹಿಂದೂ ಮುಖಂಡ ಅವಿನಾಶ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಿಂದ ಬೀದರ್ ಜಿಲ್ಲಾ ವ್ಯಾಪ್ತಿಯ ಸಾಂತಪುರ ಪೊಲೀಸ್ ಠಾಣಾ ಸರಹದ್ದಿಗೆ ಕರ್ನಾಟಕ ಪೊಲೀಸ್ ಅಧಿನಿಯಮ-1963 ರ ಕಲಂ: 55 ಪ್ರಕಾರ ಗಡಿಪಾರಿಗೆ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯಿಂದ ಆದೇಶ ಮಾಡುವ ಕುರಿತು ಪುತ್ತೂರು ಸಹಾಯಕ ಆಯುಕ್ತರ ಕಚೇರಿಯ ನ್ಯಾಯಾಲಯದಲ್ಲಿ ಜ.24ರಂದು ಪೂರ್ವಾಹ್ನ 11.00 ಘಂಟೆಗೆ ವಿಚಾರಣೆ ನಡೆಯಲಿದೆ.
ವಿಚಾರಣೆಗೆ ಸಂಬಂಧಪಟ್ಟಂತೆ ಅವಿನಾಶ್ ಸ್ವತಃ ಯಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಈ ಮೂಲಕ ಅವಿನಾಶ್ ಗೆ ತಿಳಿಸಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ಅವರಿಗೆ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ನೋಟೀಸ್ ನಲ್ಲಿ ತಿಳಿಸಲಾಗಿದೆ.
- Advertisement -