Monday, June 24, 2024
spot_imgspot_img
spot_imgspot_img

ಪುತ್ತೂರು: ಹಿಂದೂ ಮುಖಂಡ ಅವಿನಾಶ್‌ಗೆ ಗಡಿಪಾರು ಆದೇಶ; ವಿಚಾರಣೆಗೆ ಹಾಜರಾಗುವಂತೆ ನೋಟಿಸ್..!

- Advertisement -G L Acharya panikkar
- Advertisement -

ಪುತ್ತೂರು: ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನರಿಮೊಗರು ಗ್ರಾಮದ ಪುರುಷರಕಟ್ಟೆ ನಿವಾಸಿ ಹಿಂದೂ ಮುಖಂಡ ಅವಿನಾಶ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಿಂದ ಬೀದರ್ ಜಿಲ್ಲಾ ವ್ಯಾಪ್ತಿಯ ಸಾಂತಪುರ ಪೊಲೀಸ್ ಠಾಣಾ ಸರಹದ್ದಿಗೆ ಕರ್ನಾಟಕ ಪೊಲೀಸ್ ಅಧಿನಿಯಮ-1963 ರ ಕಲಂ: 55 ಪ್ರಕಾರ ಗಡಿಪಾರಿಗೆ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯಿಂದ ಆದೇಶ ಮಾಡುವ ಕುರಿತು ಪುತ್ತೂರು ಸಹಾಯಕ ಆಯುಕ್ತರ ಕಚೇರಿಯ ನ್ಯಾಯಾಲಯದಲ್ಲಿ ಜ.24ರಂದು ಪೂರ್ವಾಹ್ನ 11.00 ಘಂಟೆಗೆ ವಿಚಾರಣೆ ನಡೆಯಲಿದೆ.

ವಿಚಾರಣೆಗೆ ಸಂಬಂಧಪಟ್ಟಂತೆ ಅವಿನಾಶ್ ಸ್ವತಃ ಯಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಈ ಮೂಲಕ ಅವಿನಾಶ್ ಗೆ ತಿಳಿಸಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ಅವರಿಗೆ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ನೋಟೀಸ್ ನಲ್ಲಿ ತಿಳಿಸಲಾಗಿದೆ.

- Advertisement -

Related news

error: Content is protected !!