Friday, May 23, 2025
spot_imgspot_img
spot_imgspot_img

ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಂತ ನೃತ್ಯ ಗೋಪಾಲ್ ದಾಸ್ ಗೆ ಕೊರೊನಾ ಪಾಸಿಟಿವ್

- Advertisement -
- Advertisement -

ಲಕ್ನೋ: ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಂತ ನೃತ್ಯ ಗೋಪಾಲ್ ದಾಸ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.

ಈ ಬಗ್ಗೆ ಉತ್ತರ ಪ್ರದೇಶ ಸರ್ಕಾ ಹೇಳಿಕೆ ಬಿಡುಗಡೆ ಮಾಡಿದೆ. ಗೋಪಾಲ್ ದಾಸ್ ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಪರೀಕ್ಷೆಗಾಗಿ ವೈದ್ಯರ ತಂಡವನ್ನು ಅವರ ಬಳಿ ಕಳುಹಿಸಲಾಗಿತ್ತು. ನಂತರ ಆ್ಯಂಟಿಜೆನ್ ಟೆಸ್ಟ್ ಮಾಡಿಸಿದಾಗ ಕೊರೊನ ಪಾಸಿಟಿವ್ ಬಂದಿದೆ. ಅವರಿಗೆ ಸ್ವಲ್ಪ ಉಸಿರಾಟದ ಸಮಸ್ಯೆಯಿದೆ. ಆದರೆ ಗಂಭಿರವಾದ ಯಾವುದೇ ಸಮಸ್ಯೆಯಿಲ್ಲ ಎಂದು ತಿಳಿಸಿದೆ.ಇನ್ನು ಗೋಪಾಲ್ ದಾಸ್ ಅವರನ್ನು ಮೇದಾಂತ ಆಸ್ಪತ್ರೆಗೆ ಶಿಫ್ಟ್ ಮಾಡುವಂತೆ ಸಿಎಂ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ.

ಪ್ರಧಾನಿ ಜತೆ ವೇದಿಕೆ ಹಂಚಿಕೊಂಡಿದ್ದ ಮಹಂತ ನೃತ್ಯ ಗೋಪಾಲ್ ದಾಸ್:

ಆಗಸ್ಟ್ 5ರಂದು ರಾಮಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಹಂತ ನೃತ್ಯ ಗೋಪಾಲ್ ದಾಸ್ ಅವರು ಪ್ರಧಾನಿ ಮೋದಿ ಜತೆ ವೇದಿಕೆ ಹಂಚಿಕೊಂಡಿದ್ದರು. ಇವರೊಂದಿಗೆ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಸಿಎಂ ಯೋಗಿ ಆದಿತ್ಯನಾಥ್, ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ವೇದಿಕೆ ಮೇಲಿದ್ದರು.

- Advertisement -

Related news

error: Content is protected !!