Monday, May 6, 2024
spot_imgspot_img
spot_imgspot_img

ಅಪರಿಚಿತ ವ್ಯಕ್ತಿಯಿಂದ ಅಯೋಧ್ಯೆಯ ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಕರೆ ; ಖಾಕಿ ಕಣ್ಗಾವಲು

- Advertisement -G L Acharya panikkar
- Advertisement -

ಉತ್ತರ ಪ್ರದೇಶ : ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ನೂತನ ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ನೀಡಿದ್ದಾಗಿ ಅಯೋಧ್ಯೆ ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಅಯೋಧ್ಯೆಯ ರಾಮಕೋಟ್​ ನಿವಾಸಿಯಾದ ಮನೋಜ್​ ಎಂಬವರಿಗೆ ಅಪರಿಚಿತ ನಂಬರ್​​ನಿಂದ ಕರೆ ಬಂದಿದ್ದು, ಇಡೀ ಶ್ರೀರಾಮಜನ್ಮಭೂಮಿ ಸಂಕೀರ್ಣವನ್ನೇ ಸ್ಫೋಟಿಸುವುದಾಗಿ ಆತನ ಹೇಳಿದ್ದಾನೆಂದು ಮನೋಜ್​ ದೂರು ನೀಡಿದ್ದಾರೆ ಎಂದು ತಿಳಿದ್ದಾರೆ.

ಇನ್ನು ಗುರುವಾರ ಬೆಳಗ್ಗೆ 10 ಗಂಟೆ ಹೊತ್ತಿಗೆ ಅಯೋಧ್ಯಾ ರಾಮಮಂದಿರ ಸ್ಫೋಟಿಸುವುದಾಗಿ ಕರೆ ಮಾಡಿದ್ದಾನೆ ಎಂದು ಮನೋಜ್​ ಅವರು ಪೊಲೀಸ್‌ರಿಗೆ ಮಾಹಿತಿ ನೀಡಿದ್ದು, ಪೊಲೀಸರು ಅಯೋಧ್ಯೆಯ ಶ್ರೀರಾಮಮಂದಿರದ ಸುತ್ತ ಸೇರಿ, ಹಲವು ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದ್ದೇವೆ ಎಂದು ರಾಮ ಜನ್ಮಭೂಮಿ ಪೊಲೀಸ್​ ಠಾಣೆಯ ಹಿರಿಯ ಅಧಿಕಾರಿ ಸಂಜೀವ್​ ಕುಮಾರ್ ಸಿಂಗ್ ತಿಳಿಸಿದ್ದಾರೆ.

- Advertisement -

Related news

error: Content is protected !!