- Advertisement -
- Advertisement -
ಉತ್ತರ ಪ್ರದೇಶ : ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ನೂತನ ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ನೀಡಿದ್ದಾಗಿ ಅಯೋಧ್ಯೆ ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಅಯೋಧ್ಯೆಯ ರಾಮಕೋಟ್ ನಿವಾಸಿಯಾದ ಮನೋಜ್ ಎಂಬವರಿಗೆ ಅಪರಿಚಿತ ನಂಬರ್ನಿಂದ ಕರೆ ಬಂದಿದ್ದು, ಇಡೀ ಶ್ರೀರಾಮಜನ್ಮಭೂಮಿ ಸಂಕೀರ್ಣವನ್ನೇ ಸ್ಫೋಟಿಸುವುದಾಗಿ ಆತನ ಹೇಳಿದ್ದಾನೆಂದು ಮನೋಜ್ ದೂರು ನೀಡಿದ್ದಾರೆ ಎಂದು ತಿಳಿದ್ದಾರೆ.
ಇನ್ನು ಗುರುವಾರ ಬೆಳಗ್ಗೆ 10 ಗಂಟೆ ಹೊತ್ತಿಗೆ ಅಯೋಧ್ಯಾ ರಾಮಮಂದಿರ ಸ್ಫೋಟಿಸುವುದಾಗಿ ಕರೆ ಮಾಡಿದ್ದಾನೆ ಎಂದು ಮನೋಜ್ ಅವರು ಪೊಲೀಸ್ರಿಗೆ ಮಾಹಿತಿ ನೀಡಿದ್ದು, ಪೊಲೀಸರು ಅಯೋಧ್ಯೆಯ ಶ್ರೀರಾಮಮಂದಿರದ ಸುತ್ತ ಸೇರಿ, ಹಲವು ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದ್ದೇವೆ ಎಂದು ರಾಮ ಜನ್ಮಭೂಮಿ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿ ಸಂಜೀವ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
- Advertisement -