Saturday, May 4, 2024
spot_imgspot_img
spot_imgspot_img

ಧರ್ಮಸ್ಥಳ: ಅಯ್ಯಪ್ಪ ಮಾಲೆ ಧರಿಸಿ, ಸಂಸ್ಥೆಯೊಂದರ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸಿ ವಂಚನೆ

- Advertisement -G L Acharya panikkar
- Advertisement -

ಧರ್ಮಸ್ಥಳ : ಅಯ್ಯಪ್ಪ ಮಾಲೆ ಧರಿಸಿ, ಸಂಸ್ಥೆಯೊಂದರ ಹೆಸರನ್ನು ದುರುಪಯೋಗಪಡಿಸಿಕೊಂಡು ದೇಣಿಗೆ ಸಂಗ್ರಹಿಸಿ ವಂಚಿಸುತ್ತಿದ್ದ ಇಬ್ಬರು ಯುವಕರನ್ನು ಹಿಡಿದು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ನಡೆದಿದೆ.

ಯುವಕರು ಬೆಂಗಳೂರಿನ ಸ್ವಾಮಿ ವಿವೇಕಾನಂದ ಸೋಷಿಯಲ್ ಸರ್ವಿಸ್ ಟ್ರಸ್ಟ್ (ರಿ) ಹೆಸರಲ್ಲಿ ನಿಡ್ಲೆ ಗ್ರಾಮದ ಧನುಷ್ ಎಂಬವರ ಬಳಿ ದೇಣಿಗೆ ಕೇಳಿದ್ದಾರೆ. ಅನುಮಾನಗೊಂಡ ಧನುಷ್ ಸಂಸ್ಥೆಯ ಮೊಬೈಲ್ ನಂಬರ್‌ಗೆ ಕರೆ ಮಾಡಿ ವಿಚಾರಿಸಿದ್ದಾರೆ. ಆಗ ಸಂಸ್ಥೆಯವರು ನಾವು ಯಾರನ್ನೂ ಕಳುಹಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ವಿಷಯ ತಿಳಿದ ಕೂಡಲೆ ಧನುಷ್ ಸೇರಿದಂತೆ ಸುತ್ತಮುತ್ತಲಿನ ಜನರು ಯುವಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇಬ್ಬರು ಯುವಕರಲ್ಲಿ ಓರ್ವ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದ್ದನು. ಘಟನೆ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!