Saturday, June 28, 2025
spot_imgspot_img
spot_imgspot_img

ಲಂಚಾವತಾರ !! – ಬಂಟ್ವಾಳ ತಾಲೂಕು ಕಚೇರಿಗೆ ಎಸಿಬಿ ದಾಳಿ

- Advertisement -
- Advertisement -

ಬಂಟ್ವಾಳ: ಆರ್.ಟಿ.ಸಿ. ತಿದ್ದುಪಡಿ ಮಾಡಲೆಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಬಂದ ದೂರಿ ಮೇರೆಗೆ ದಕ್ಷಿಣ ಕನ್ನಡದ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧಿಕಾರಿಗಳು ಬಂಟ್ವಾಳ ತಾಲೂಕು ಕಚೇರಿಗೆ ದಾಳಿ ನಡೆಸಿದರು. ದಾಳಿ ವೇಳೆ ಉಪತಹಸೀಲ್ದಾರ್ ರವಿಶಂಕರ್ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದು. ಅವರನ್ನು ಬಂಧಿಸಲಾಯಿತು. ಗುರುವಾರ ಮಧ್ಯಾಹ್ನ ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ಘಟನೆ ನಡೆದಿದೆ.

ದೂರುದಾರರು ತಾಯಿಯ ಹೆಸರಲ್ಲಿರುವ ಜಾಗಕ್ಕೆ ಸಂಬಂಧಿಸಿ ಆರ್.ಟಿ.ಸಿ.ಯಲ್ಲಿ ತಿದ್ದುಪಡಿ ಮಾಡಿಕೊಡಲು ಉಪತಹಸೀಲ್ದಾರ್ 1,500 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಪ್ರಕರಣ ದಾಖಲಿಸಲಾಗಿದ್ದು. 1,000 ರೂ. ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಅಧಿಕಾರಿಗಳು ದಾಳಿ ನಡೆಸಿದರು.

ಪೊಲೀಸ್ ಅಧೀಕ್ಷಕ ಬೋಪಯ್ಯ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕೆ.ಸಿ.ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಂಸುಂದರ್, ಗುರುರಾಜ್ ಹಾಗೂ ಸಿಬ್ಬಂದಿಗಳಾದ ಹರಿಪ್ರಸಾದ್, ರಾಧಾಕೃಷ್ಣ, ಉಮೇಶ್, ರಾಧಾಕೃಷ್ಣ ಡಿ.ಎ, ಪ್ರರ್ಶಾಂತ್ ಎಂ, ವೈಶಾಲಿ, ರಾಜೇಶ್ ಪಿ, ರಾಕೇಶ್ ವಾಗ್ಮೇನ್, ಸತೀಶ್ ಹಾಗೂ ಭರತ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

- Advertisement -

Related news

error: Content is protected !!