Saturday, April 20, 2024
spot_imgspot_img
spot_imgspot_img

ಎರಡು ದಿನದ ಪುಟ್ಟ ಕಂದಮ್ಮನ ಕದ್ದು ಮಾರಾಟ ಪ್ರಕರಣ-ಇಬ್ಬರು ಆರೋಪಿಗಳ ಬಂಧನ

- Advertisement -G L Acharya panikkar
- Advertisement -

ಬೆಂಗಳೂರು: ಇಲ್ಲಿನ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಎರಡು ದಿನದ ಪುಟ್ಟ ಕಂದಮ್ಮನನ್ನು ಕದ್ದು ಮಾರಾಟ ಮಾಡಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ವಿವಿಪುರಂ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕಳ್ಳತನವಾಗಿದ್ದ ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನವೆಂಬರ್ 9 ರಂದು ಅಬ್ದುಲ್ ರಶೀದ್, ಆರ್ಶೀಯಾ ದಂಪತಿಗೆ ಹೆಣ್ಣು ಮಗು ಜನಿಸಿತ್ತು. ಮಗುವಿನ ಶ್ವಾಸಕೋಶದಲ್ಲಿ ತೊಂದರೆ ಕಾಣಿಸಿಕೊಂಡ ಕಾರಣ ಮಗುವನ್ನು ಐಸಿಯುನಲ್ಲಿ ಇರಿಸಲಾಗಿತ್ತು. ನವೆಂಬರ್ 11 ಮಗುವಿನ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಇದೇ ಸಮಯಕ್ಕೆ ಮಹಿಳೆಯೊಬ್ಬಳು ವಾಣಿ ವಿಲಾಸ ಮಕ್ಕಳ ಆಸ್ಪತ್ರೆಗೆ ಬಂದಿದ್ದಾಳೆ. ಮಗುವನ್ನು ತನ್ನದೇ ಎಂಬಂತೆ ಬಿಂಬಿಸಿಕೊಂಡು ಕದ್ದು ಪರಾರಿಯಾಗಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಗುವಿನ ಅಜ್ಜಿ ಎಂದು ಹೇಳಿಕೊಂಡು ಸೆಕ್ಯುರಿಟಿ ಗಾರ್ಡ್ ಹಾದಿ ತಪ್ಪಿಸಿರುವ ಮಹಿಳೆ, ಮಗುವನ್ನು ಕದ್ದು ಪರಾರಿಯಾಗಿದ್ದಾಳೆ. ಕದ್ದ ಮಗುವನ್ನು ಕುಮಾರಸ್ವಾಮಿ ಲೇಔಟ್ ನಲ್ಲಿ 80 ಸಾವಿರ ರೂಪಾಯಿಗೆ ಮಾರಾಟ ಮಾಡಿದ್ದಾಳೆ. ಈ ಕುರಿತು ತನಿಖೆ ನಡೆಸಿದ ವಿವಿಪುರಂ ಠಾಣೆ ಪೊಲೀಸರು ಆರೋಪಿ ದಂಪತಿಯನ್ನು ಬಂಧಿಸಿ ಮಗುವನ್ನು ರಕ್ಷಿಸಿದ್ದಾರೆ.

- Advertisement -

Related news

error: Content is protected !!