Thursday, May 2, 2024
spot_imgspot_img
spot_imgspot_img

ಹಳೆ ವೈಷಮ್ಯ ಹಿನ್ನೆಲೆ; ಚಾಕುವಿನಿಂದ ಇರಿದು ಯುವಕನ ಕೊಲೆ..!

- Advertisement -G L Acharya panikkar
- Advertisement -

ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಊರ ಹಬ್ಬದಂದು ಯುವಕನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹೊಸದುರ್ಗ ತಾಲೂಕಿನ ನಾಗನಾಯಕನಕಟ್ಟೆ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ಯುವಕ ಹಿರಿಯೂರು ತಾಲೂಕಿನ ಸೋಮೇನಹಳ್ಳಿ ತಾಂಡಾದ ಮನೋಜ್ (21) ಎಂದು ಗುರುತಿಸಲಾಗಿದೆ.

ರಘು ಮತ್ತು ಮನೋಜ್ ಒಂದೇ ಊರಿನವರು. ಇವರ ನಡುವೆ ಹಳೆಯ ವೈಷಮ್ಯವಿತ್ತು. ಈ ಸಂಬಂಧ ಊರ ಹಬ್ಬದ ದಿನದಂದು ಗಲಾಟೆ ನಡೆದಿದೆ. ಗಲಾಟೆ ತಾರಕಕ್ಕೆ ಏರುತ್ತಿದ್ದಂತೆ ಚಾಕುವಿನಿಂದ ಇರಿದಿದ್ದಾನೆ. ಬಳಿಕ ಸ್ಥಳೀಯರು ಯುವಕನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಹಳೆಯ ವೈಷಮ್ಯದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ಈ ಸಂಬಂಧ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!