Friday, May 3, 2024
spot_imgspot_img
spot_imgspot_img

ಕಾಸರಗೋಡು: ಗಲ್ಪ್‌ನಿಂದ ಊರಿಗೆ ಹೊರಟಿದ್ದ ಯುವಕ ನಾಪತ್ತೆ

- Advertisement -G L Acharya panikkar
- Advertisement -
vtv vitla

ಕಾಸರಗೋಡು: ಗಲ್ಫ್ ನಿಂದ ಊರಿಗೆಂದು ವಿಮಾನ ನಿಲ್ದಾಣಕ್ಕೆ ಬಂದಿಳಿದ ಬದಿಯಡ್ಕದ ಯುವಕನೋರ್ವ ಮನೆಗೆ ಬಾರದೇ ನಾಪತ್ತೆಯಾದ ಬಗ್ಗೆ ಬದಿಯಡ್ಕ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ.

ವಿದ್ಯಾಗಿರಿ ಮುನಿಯೂರಿನ ಮುಹಮ್ಮದ್ ಸಿದ್ದೀಕ್ (28) ನಾಪತ್ತೆಯಾದವರು.

ಸಿದ್ದೀಕ್ ಸೆ.25 ರಂದು ಊರಿಗೆ ಬರುವುದಾಗಿ ಮನೆಯವರಿಗೆ ತಿಳಿಸಿದ್ದರು. ಅಂದು ಕೋಜಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಸಿದ್ದೀಕ್ ಮನೆಗೆ ತಲುಪಿಲ್ಲ. ಮೊಬೈಲ್ ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿರುವುದು ಕಂಡು ಬಂದಿದೆ.

ರಾತ್ರಿ ಸಿದ್ದೀಕ್ ನನ್ನು ವಿಚಾರಿಸಿ ತಂಡವೊಂದು ಮನೆಗೆ ಬಂದಿದ್ದು, ಕೋಜಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಬಳಿಕ ಯಾರಾದರೂ ಅಪಹರಿಸಿದ್ದಾರೆ ಅಥವಾ ಬೇರೆ ಎಲ್ಲಿಗಾದರೂ ತೆರಳಿರಬಹುದೇ ಎಂಬ ಸಂಶಯ ಉಂಟಾಗಿದೆ. ತಂದೆ ಯೂಸಫ್ ನೀಡಿದ ದೂರಿನಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

- Advertisement -

Related news

error: Content is protected !!