- Advertisement -
- Advertisement -
ಬೈಂದೂರು: 2 ವರ್ಷದ ಮಗುವೊಂದು ಮನೆ ಸಮೀಪದ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಉಪ್ಪುಂದ ಗ್ರಾಮದ ಕರ್ಕಿಕಳಿ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.
ಮೃತಪಟ್ಟ ಮಗುವನ್ನು ಕರ್ಕಿಕಳಿಯ ವಿಶ್ವನಾಥ ಖಾರ್ವಿ ಎಂಬವರ ಪುತ್ರ ಸರ್ವದ(2) ಎನ್ನಲಾಗಿದೆ.
ಇವರು ಮನೆಯ ಕೋಣೆಯಲ್ಲಿ ಮಗುವನ್ನು ಮಲಗಿಸಿ ಉಪ್ಪುಂದ ಪೇಟೆಗೆ ಹೋಗಿದ್ದರು. ಅಪರಾಹ್ನ 3:30ರಿಂದ ಸಂಜೆ 4 ಗಂಟೆ ಸಮಯದಲ್ಲಿ ಮಗು ಎದ್ದು ಮನೆಯಿಂದ ಹೊರಗೆ ಬಂದಿತ್ತು ಈ ವೇಳೆ ಮಗು ಮನೆಯ ಸಮೀಪವಿರುವ ಎಡಮಾವಿನ ಹೊಳೆಯ ದಡದಲ್ಲಿ ನಡೆದುಕೊಂಡು ಹೋಗುವಾಗ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದೆ ಎನ್ನಲಾಗಿದೆ.
ಎಡಮಾವಿನ ಹೊಳೆಯು ಸಮುದ್ರವನ್ನು ಸೇರುವ ಉಪ್ಪುಂದ-ಕರ್ಕಿಕಳಿ ಬ್ರೇಕ್ ವಾಟರ್ ಸಮೀಪ ಮಗುವಿನ ಮೃತದೇಹ ಪತ್ತೆಯಾಗಿದೆ. ಈ ಘಟನೆಯ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -