Saturday, June 28, 2025
spot_imgspot_img
spot_imgspot_img

ಬಜ್ಪೆ: ಕಳ್ಳತನ ಪ್ರಕರಣ; ಸೊತ್ತು ಸಹಿತ ಆರೋಪಿ ಅರೆಸ್ಟ್..!

- Advertisement -
- Advertisement -

ಬಜ್ಪೆ: ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯೋರ್ವನನ್ನು ಬಜ್ಪೆ ಪೊಲೀಸರು ಬಂಧಿಸಿ, ಕಳವುಗೈದಿದ್ದ ನಗದು, ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಬಜ್ಪೆಯಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಮೂಡುಪೆರಾರ ಗ್ರಾಮದ ಮಿತ್ತಕೊಳಪಿಲದ ನಿವಾಸಿ ಪ್ರತಾಪ್ ಎಂದು ಗುರುತಿಸಲಾಗದೆ.

ಬಂಧಿತನಿಂದ 10 ಸಾವಿರ ರೂ. ನಗದು, ಸುಮಾರು 1 ಲಕ್ಷ ರೂ. ಮೌಲ್ಯದ 4 ಗೋಣಿ ಚೀಲ ಸುಲಿದ ಅಡಿಕೆ, ಸುಮಾರು 2 ಲಕ್ಷ ರೂ. ಮೌಲ್ಯದ ಆಟೋ ರಿಕ್ಷಾ ಮತ್ತು ಇತರ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಫೆ.13ರಂದು ಮಿತ್ತಕೊಳಪಿಲದ ಬಳಿಯ ಜನಾರ್ದನ ಗೌಡ ಎಂಬವರ ಮನೆಯಲ್ಲಿದ್ದ 40 ಸಾವಿರ ರೂ. ಹಣ ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಬಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಕಾರ್ಯಾಚರಣೆ ನಡೆಸಿದ ಪೊಲೀಸರು ಸಂಶಯದ ಮೇಲೆ ಪ್ರತಾಪ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಈ ವೇಳೆ ಆರೋಪಿ ಪ್ರತಾಪ್ ಜನಾರ್ದನ ಗೌಡರ ಮನೆಯಿಂದ ನಗದು ಕಳವುಗೈದಿರುವುದು ಮತ್ತು 2023ರಲ್ಲಿ ಕೊಂಪದವು ನೆಲ್ಲಿಗುಡ್ಡೆಯ ನಿವಾಸಿ ಗೋವಿಂದ ಗೌಡ ಎಂಬವರ ಮನೆಯಿಂದ 4 ಗೋಣಿ ಚೀಲದಲ್ಲಿ ತುಂಬಿಸಿದ್ದ ಸುಲಿದ ಅಡಿಕೆಯನ್ನು ಕಳವು ಮಾಡಿರುವುದು ಮತ್ತು ಇತರ ಕಳವು ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಅಲ್ಲದೆ, ಆರೋಪಿಯ ವಿರುದ್ಧ ಬ್ಯಾಟರಿಗಳನ್ನು ಕಳವು ಮಾಡಿರುವ ಎರಡು ಪ್ರತ್ಯೇಕ ಪ್ರಕರಣಗಳು ಬಜ್ಪೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!