ವಿಟ್ಲ: ಬಾಲಗೋಕುಲ ಸಮಿತಿ ವಿಟ್ಲ ಕ್ಷೇತ್ರ, ಮೈತ್ರೇಯಿ ಗುರುಕುಲದ ಸಹಕಾರದೊಂದಿಗೆ 16ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯು ಸೆ.06ರಂದು ಸುವರ್ಣ ರಂಗಮಂದಿರ ವಿಠಲ ಪದವಿ ಪೂರ್ವ ಕಾಲೇಜು ವಿಟ್ಲದಲ್ಲಿ ನಡೆಯಲಿದೆ.
ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಿಂದ ಬೆಳಿಗ್ಗೆ 9.30ಕ್ಕೆ ವಿಟ್ಲ ಸುತ್ತಮುತ್ತಲಿನ ಎಲ್ಲಾ ಶ್ರೀಕೃಷ್ಣ ವೇಷಧಾರಿ ಮಕ್ಕಳಿಂದ ಶೋಭಾಯಾತ್ರೆಯು ಪ್ರಾರಂಭಗೊಳ್ಳಲಿದ್ದು, ಸಿವಿಲ್ ಇಂಜಿನಿಯರ್ ಆಕೃತಿ ಆಸೋಸಿಯೇಟ್ಸ್ನ ದಿನೇಶ್ ಮಾಡ್ತೇಲ್ ಶೋಭಾಯಾತ್ರೆಯನ್ನು ಉದ್ಘಾಟನೆ ಮಾಡಲಿದ್ದಾರೆ.
ಬಳಿಕ ವಿಠಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗಮಂದಿರದಲ್ಲಿ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಹಿರಿಯ ಸ್ವಯಂ ಸೇವಕ ರಾಮಪ್ಪ ಭಂಡಾರಿ, ಚಂದಳಿಕೆ ದೀಪ ಪ್ರಜ್ವಲನೆಗೊಳಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಇಡ್ಕಿದು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಶೆಟ್ಟಿ ಬೀಡಿನಮಜಲು ವಹಿಸಲಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಲೋಕೇಶ ಜೋಡುಕಲ್ಲು ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದು, ಅತಿಥಿಯಾಗಿ ಲಯನ್ಸ್ ಕ್ಲಬ್ ವಿಟ್ಲ ಅಧ್ಯಕ್ಷೆ ಜಲಜಾಕ್ಷಿ ಬಾಲಕೃಷ್ಣ ಗೌಡ ಪೊನ್ನೆತ್ತಾಡಿ ಭಾಗವಹಿಸಲಿದ್ದಾರೆ.
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಜೇಶ್ ವಿಟ್ಲ ಸಾರಥ್ಯದ ನಾಟ್ಯ ಗುರು ರಕ್ಷಿತ್ ಶೆಟ್ಟಿ ಪಡ್ರೆ ನಿರ್ದೇಶನದ, ಆರ್.ಕೆ ಯಕ್ಷಗಾನ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ “ಶ್ರೀ ಕೃಷ್ಣ ಲೀಲಾಮೃತ” ಪೌರಾಣಿಕ ಯಕ್ಷಗಾನ ನಡೆಯಲಿದೆ.