ಬಾಳ್ತಿಲ ಗ್ರಾಮಪಂಚಾಯತ್ನ ಅಧ್ಯಕ್ಷರಾಗಿ ಕಳೆದ ಎರಡೂವರೆ ವರ್ಷಗಳಿಂದ ಉತ್ತಮವಾಗಿ ಸೇವೆ ಸಲ್ಲಿಸಿದ ಹಿರಣ್ಮಯಿ ಅವರಿಗೆ ಕೃತಜ್ಞತೆ ಕಾರ್ಯಕ್ರಮ ನಡೆಯಿತು.
ಇವರು ಬಾಳ್ತಿಲ ಗ್ರಾಮದ ಕಲ್ಲಡ್ಕದ ಹನುಮಾನ್ ನಗರದಲ್ಲಿ ಜನಿಸಿ ರಾಜಕೀಯವಾಗಿ, ಧಾರ್ಮಿಕ ಹಾಗೂ ಸಾಮಾಜಿಕವಾಗಿ 30ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಕಳೆದ 17ವರ್ಷ ಕಾಲ ಅಂಗನವಾಡಿ ಕಾರ್ಯಕರ್ತೆಯಾಗಿ, ನಂತರ ಚುನಾವಣೆಯಲ್ಲಿ ಸ್ಫರ್ಧಿಸಿ 5 ವರ್ಷಗಳ ಕಾಲ ಗ್ರಾಮ ಪಂಚಾಯತ್ ಸದಸ್ಯರಾಗಿ, 2020ರಲ್ಲಿ ನಡೆದ ಚುನಾವಣೆಯಲ್ಲಿ ಸ್ಫರ್ಧಿಸಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಗೊಂಡು ಸುಮಾರು ಎರಡೂವರೆ ವರ್ಷಗಳ ಕಾಲ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ವಸತಿಯೋಜನೆ, ಮನಸ್ವಿನಿ, ಅಂಗವಿಕಲ, ವಿಧವಾ ವೇತನ, ಸಂಧ್ಯಾಸುರಕ್ಷಾ, ವೃದ್ದಾಪ್ಯ ವೇತನ ಇನ್ನೂ ಹಲವಾರು ಯೋಜನೆಗಳ ಸೌಲಭ್ಯಗಳನ್ನು ಜನರಿಗೆ ಒದಗಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ತಮ್ಮ ಅಧ್ಯಕ್ಷ ಅವಧಿ ಮುಗಿದು ಸುಮಾರು ಎರಡೂವರೆ ವರ್ಷಗಳ ಕಾಲ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಸಲುವಾಗಿ ಪಂಚಾಯತ್ ವತಿಯಿಂದ ಕೃತಜ್ಞತಾ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಕೆ ಅಣ್ಣು ಪೂಜಾರಿ, ಉಪಾಧ್ಯಕ್ಷತೆ ರಂಜಿನಿ, ನಿಕಟಪೂರ್ವ ಅಧ್ಯಕ್ಷೆ ಹಿರಣ್ಮಯಿ, ಉಪಾಧ್ಯಕ್ಷೆ ಜ್ಯೋತಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂಧ್ಯಾ, ಕಾರ್ಯದರ್ಶಿ ಸುರೇಖಾ ಹಾಗೂ ಪಂಚಾಯತ್ನ ಎಲ್ಲಾ ಸದಸ್ಯರುಗಳು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಆರ್. ಚೆನ್ನಪ್ಪ ಕೋಟ್ಯಾನ್, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಮಾಜಿ ತಾಲೂಕು ಪಂಚಾಯತ್ ಸದಸ್ಯ ಲಕ್ಷ್ಮೀಗೋಪಾಲ ಆಚಾರಿ, ಕಲ್ಪವೃಕ್ಷ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಕಸ್ತೂರಿ ಹಾಗೂ ಆಡಳಿತ ವರ್ಗ, MBK,LCRP ಪಂಚಾಯತ್ ಸಿಬ್ಬಂದಿ ವರ್ಗ, ಆರೋಗ್ಯ ಸುರಕ್ಷಾ ಅಧಿಕಾರಿ ಸರಸ್ವತಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಕ-ಶಿಕ್ಷಕಿಯರು ಹಾಗೂ ಪಂಚಾಯತ್ ಎಲ್ಲಾ ಪಂಪು ಚಾಲಕರು ಉಪಸ್ಥಿತಿರಿದ್ದರು. ಮಾಜಿ ಅಧ್ಯಕ್ಷ ವಿಠಲ್ ನಾಯ್ಕ್ ಇವರು ಕಾರ್ಯಕ್ರಮ ನಿರೂಪಿಸಿದರು.