Wednesday, July 22, 2026
spot_imgspot_img
spot_imgspot_img

ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ; ಸಚಿವ ಎಸ್. ಸುರೇಶ್ ಕುಮಾರ್ ಹೇಳಿಕೆ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೋವಿಡ್19 ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಇದೇ ವೇಳೆ ಮೊದಲ ವರ್ಷದ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದು ಮಾಡಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರವನ್ನೂ ತೆಗೆದುಕೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಎಂದರು.

ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಎಂದಿನಂತೆ ಮುಂದುವರೆಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಮೊದಲನೆ ಪಿಯು ವಿದ್ಯಾರ್ಥಿಗಳಿಗೆ ಪ್ರಮೋಷನ್: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದ ಮುನ್ನ ಬ್ರಿಡ್ಜ್ ಕೋರ್ಸ್ಗಳನ್ನು ನಡೆಸಲಾಗುತ್ತದೆ. ಹಾಗೆಯೇ ಇಲಾಖೆಯ ಯೂ-ಟ್ಯೂಬ್ ಚಾನಲ್ಗಳ ಮೂಲಕ ಈಗಿನಿಂದಲೇ ಈ ಬ್ರಿಡ್ಜ್ ಕೋರ್ಸ್ಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದೂ ಅವರು ತಿಳಿಸಿದರು.

- Advertisement -

Related news

error: Content is protected !!