Thursday, April 25, 2024
spot_imgspot_img
spot_imgspot_img

ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ: ಆತಂಕದಲ್ಲಿ ಸಿಬ್ಬಂದಿ..!

- Advertisement -G L Acharya panikkar
- Advertisement -

ಬೆಂಗಳೂರು: ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ವಿಮಾಣ ನಿಲ್ದಾಣದ ಭದ್ರತಾ ಸಿಬ್ಬಂದಿ ಹಾಗೂ ಶ್ವಾನದಳದಿಂದ ತೀವ್ರ ತಪಾಸಣೆ ನಡೆಯುತ್ತಿದ್ದು, ವಿಮಾನಗಳಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ನಿಲ್ದಾಣದಲ್ಲಿರುವ ಜನ ಸೇರಿ ಸಿಬ್ಬಂದಿಗಳು ಆತಂಕದಲ್ಲಿದ್ದು, ತಪಾಸಣೆ ಕಾರ್ಯಾಚರಣೆ ಮುಂದುವರೆದಿದೆ. ವಿಮಾನವನ್ನ ರನ್‌ವೇ ಬಳಿಯೇ ನಿಲ್ಲಿಸಿ, ಪ್ರಯಾಣಿಕರನ್ನ ಕೆಳಗೆ ಇಳಿಸಲಾಗಿದ್ದು, ಭದ್ರತಾ ಪಡೆಗಳು ಮತ್ತು ಶ್ವಾನದಳದಿಂದ ತೀವ್ರ ತಪಾಸಣಾ ಕಾರ್ಯ ನಡೆಯುತ್ತಿದೆ ಎಂದು ಹೇಳಲಾಗಿದೆ.

- Advertisement -

Related news

error: Content is protected !!