Friday, May 3, 2024
spot_imgspot_img
spot_imgspot_img

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆ ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಬೃಹತ್ ಧರಣಿ

- Advertisement -G L Acharya panikkar
- Advertisement -

ಬೆಂಗಳೂರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆ ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಬೃಹತ್ ಧರಣಿ ನಡೆಸಲು ಮುಂದಾಗಿದ್ದಾರೆ. ಎಐಯುಟಿಯುಸಿ ವತಿಯಿಂದ ರಾಜ್ಯಮಟ್ಟದ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿರುವ ಆಶಾ ಕಾರ್ಯಕರ್ತೆಯರು, ಸರ್ಕಾರಕ್ಕೆ ದುಡಿಯುವ ವರ್ಗದ ನೋವು ತಿಳಿಸಲು ಬೀದಿಗಿಳಿಯಲಿದ್ದಾರೆ. ಮಾಸಿಕ ವೇತನ ₹12 ಸಾವಿರ ನಿಗದಿ ಪಡಿಸುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್​ನಲ್ಲಿ ಅಹೋ ರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ.

ಈ ಬಗ್ಗೆ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ ಮಾಹಿತಿ ನೀಡಿದ್ದು, ಆರೋಗ್ಯ ಸಚಿವರು ಜುಲೈನಲ್ಲಿ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಸಿಎಂ ಯಡಿಯೂರಪ್ಪ ಹಾಗೂ ಡಿಸಿಎಂ ನಿಮ್ಮ ಜೊತೆ ಇದ್ದೀವಿ ಅಂದ್ರು, ಆದರೆ ಇವತ್ತು ಯಾರೂ ನಮ್ಮ ಜೊತೆಯಿಲ್ಲ. ಕೊಟ್ಟ ಭರವಸೆ ಹುಸಿಯಾಗಿದೆ. ಸರ್ಕಾರ ಕೊರೊನಾ ವಾರಿಯರ್ಸ್ ಶ್ರಮಕ್ಕೆ ಸ್ಪಂದಿಸಿ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.

- Advertisement -

Related news

error: Content is protected !!