Wednesday, May 15, 2024
spot_imgspot_img
spot_imgspot_img

ಬೆಂಗಳೂರು ಬಂದ್‌ಗೆ ಅನುಮತಿ ಇಲ್ಲ; .ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್ ಜಾರಿ – ನಗರ ಪೊಲೀಸ್ ಆಯುಕ್ತರು

- Advertisement -G L Acharya panikkar
- Advertisement -

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಬಂದ್‌ಗೆ ಪೊಲೀಸ್ ಇಲಾಖೆ ಅನುಮತಿ ನೀಡಿಲ್ಲ,ಬಂದ್‌ ಮಾಡಿಸುವವರ ವಿರುದ್ಧ ಕಠಿಣ ಕ್ರಮ ಎಂದ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಸೋಮವಾರ ಸಂಜೆ ಪೊಲೀಸ್‌ ಆಯುಕ್ತರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ‘ಬೆಂಗಳೂರು ಬಂದ್‌ಗೆ ಮಂಗಳವಾರ ಅವಕಾಶ ಇಲ್ಲ. ಬೆಂಗಳೂರು ನಗರದಾದ್ಯಂತ 144 ಸೆಕ್ಷನ್ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಸೋಮವಾರ ಮಧ್ಯರಾತ್ರಿ 12 ಗಂಟೆಯಿಂದ ಮಂಗಳವಾರ ಮಧ್ಯರಾತ್ರಿ 12 ಗಂಟೆಯವರೆಗೆ ಜಾರಿಯಲ್ಲಿರುತ್ತದೆ ಹಾಗೂ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ತಿಳಿಸಿದ್ದಾರೆ.

ಅಲ್ಲದೆ, ಸಾರ್ವಜನಿಕರಿಗೆ ತೊಂದರೆ ಆಗದಂತೆ ಎಲ್ಲಾ ಸುರಕ್ಷತಾ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ಒತ್ತಾಯವಾಗಿ ಬಂದ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಸ್ವಯಂಪ್ರೇರಿತವಾಗಿ ಬಂದ್ ಮಾಡುವವರಿಗೆ ಪರಿಸ್ಥಿತಿ ನೋಡಿಕೊಂಡು ಕ್ರಮವಹಿಸಲಾಗುವುದು ಎಂದರು. ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಯಾವುದೇ ಸಮಸ್ಯೆ ಇಲ್ಲ ಎಂದರು.

- Advertisement -

Related news

error: Content is protected !!