- Advertisement -
- Advertisement -
ಬೆಂಗಳೂರು: ತುಮಕೂರಿನಿಂದ ಬೆಂಗಳೂರಿಗೆ ಕೊರೊನಾ ಸೋಂಕಿತರನ್ನು ಹೊತ್ತು ತರುತ್ತಿದ್ದ ಆಂಬುಲೆನ್ಸ್ ಗೆ ಅಪರಿಚಿತ ವಾಹನ ಡಿಕ್ಕಿಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ರಸ್ತೆ ಮಧ್ಯೆಯೇ ಆಂಬುಲೆನ್ಸ್ ಹೊತ್ತಿ ಉರಿದ ಘಟನೆ ನೆಲಮಂಗಲದ ಬಳಿ ನಡೆದಿದೆ.
ತುಮಕೂರಿನಿಂದ ನಾಲ್ವರು ಸೋಂಕಿತರನ್ನು ಹೊತ್ತು ಬೆಂಗಳೂರಿಗೆ ಬರುತ್ತಿದ್ದ ಆಂಬುಲೆನ್ಸ್ ನೆಲಮಂಗಲದ ಎಡೆಹಳ್ಳಿ ಬಳಿ ಅಪಘಾತಕ್ಕೀಡಾಗಿದೆ. ಆಂಬುಲೆನ್ಸ್ ಗೆ ಇನ್ನೊಂದು ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಆಂಬುಲೆನ್ಸ್ ಗೆ ಬೆಂಕಿ ಹೊತ್ತಿಕೊಂಡಿದ್ದು, ರಸ್ತೆ ಮಧ್ಯೆಯೇ ಧಗಧಗನೆ ಉರಿದಿದೆ.
ಆಂಬುಲೆನ್ಸ್ ನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದ್ದು, ಇನ್ನೊಂದು ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ದೌಡಾಯಿಸಿದ. ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ. ಆಂಬುಲೆನ್ಸ್ ಸಂಪೂರ್ಣ ನುಜ್ಜುಗುಜ್ಜಾಗಿದೆ.
- Advertisement -